ಪಕ್ಷ ವಿರೋಧಿ ಹೇಳಿಕೆ; ಬಿಜೆಪಿ ಯಿಂದ ರೇಣುಕಾಚಾರ್ಯ ಉಚ್ಚಾಟನೆ

1:12 PM, Wednesday, March 27th, 2013
Share
1 Star2 Stars3 Stars4 Stars5 Stars
(No Ratings Yet)
Loading...

Renukachaarya ಬೆಂಗಳೂರು : ಬಿಜೆಪಿ ಮುಖಂಡರ ವಿರುದ್ದ ನೀಡಿದ ಹೇಳಿಕೆ, ಪಕ್ಷವಿರೋಧಿ ಚಟುವಟಿಕೆಗಳಿಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಯವರು ಬಿಜೆಪಿ ಅಬಕಾರಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಿದ್ದಾರೆ.

ಸದಾನಂದ ಗೌಡ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮಿಂದ ಅವರು ಹಣ ಪಡೆದಿದ್ದಾಗಿ ಮತ್ತು ಈ ಬಗ್ಗೆ ಸೂಕ್ತ ದಾಖಲೆ ಇರುವುದಾಗಿ ಸುದ್ದಿಗಾರರಿಗೆ ಹೇಳಿಕೆ ನೀಡುವ ಮೂಲಕ ರೇಣುಕಾಚಾರ್ಯ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈಗಾಗಲೇ ಬಿಜೆಪಿ ಮುಖಂಡರ ವಿರುದ್ಧ ಕಿಡಿ ಕಾರುತ್ತಾ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕೆಜೆಪಿ ಕಡೆಗೆ ದೃಷ್ಟಿ ನೆಟ್ಟಿರುವ ರೇಣುಕಾಚಾರಾರ್ಯ ಅವರನ್ನು ಪಕ್ಷವಿರೋಧಿ ಚಟುವಟಿಕೆಗಳಿಗಾಗಿ ಆರು ವರ್ಷಗಳವರೆಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಇದಲ್ಲದೆ ಎಂ.ಪಿ.ರೇಣುಕಾಚಾರ್ಯ ಅವರನ್ನು ಜಗದೀಶ್ ಶೆಟ್ಟರ್ ಸಂಪುಟದಿಂದಲೂ ವಜಾಗೊಳಿಸಲು ಬಿಜೆಪಿಯು ರಾಜ್ಯಪಾಲರಿಗೆ ಶಿಫಾರಸು ಮಾಡಿರುವುದಾಗಿ ಮೂಲಗಳು ತಿಳಿಸಿವೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English