ಎಕ್ಕೂರಿನಲ್ಲಿ ಬಸ್-ಬೈಕ್ ಡಿಕ್ಕಿ, ಸ್ಥಳದಲ್ಲೇ ಮೃತಪಟ್ಟ ಸಹೋದರರು

4:09 PM, Thursday, April 4th, 2013
Share
1 Star2 Stars3 Stars4 Stars5 Stars
(No Ratings Yet)
Loading...

Two brothers killed at Yekkurಮಂಗಳೂರು : ಎಕ್ಕೂರಿನಲ್ಲಿ ಇಂದು ಬೆಳಗ್ಗೆ ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೋಟಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಶಾರದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಮೃತರನ್ನು ಉಮರ್ ರಶೀದ್, ಮಹಮ್ಮದ್ ನೌಶಾದ್ ಎಂದು ಗುರುತಿಸಲಾಗಿದ್ದು ಇವರಿಬ್ಬರು ತೊಕ್ಕೋಟಿನ ಮಹಮ್ಮದ್ ಎಂಬುವವರ ಮಕ್ಕಳಾಗಿದ್ದಾರೆ. ಉಮರ್ ರಶೀದ್ ಬಿ.ಕಾಂ ಪದವಿಧರನಾಗಿದ್ದು, ಮೆಡಿಕಲ್ ಶಾಪ್ ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನೌಶಾದ್ ಬಂದರ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು.

ಮೃತದೇಹವನ್ನು ವೆನ್ ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಕರಣವನ್ನು ಕಂಕನಾಡಿ ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English