- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪಣಂಬೂರು ಬೀಚ್ ನಲ್ಲಿ ನೀರಾಟವಾಡುತ್ತಿದ್ದ ವಿದ್ಯಾರ್ಥಿ ನೀರುಪಾಲು

Panamburu beach [1]ಮಂಗಳೂರು : ಪರೀಕ್ಷೆ ಬರೆಯಲೆಂದು ಚಿಕ್ಕಮಗಳೂರಿನಿಂದ ಮಂಗಳೂರಿಗೆ ಆಗಮಿಸಿದ ವಿದ್ಯಾರ್ಥಿಯೊಬ್ಬ ಪಣಂಬೂರು ಬೀಚ್ ನಲ್ಲಿ ನಿರಾಟವಾಡುತ್ತಿದ್ದ ವೇಳೆ ಸಮುದ್ರದ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ. ಮೃತ ದುರ್ದೈವಿ ಚಿಕ್ಕಮಂಗಳೂರಿನ ಅಕಾಶ್ ಕಡೂರ್ (17).

ಚಿಕ್ಕಮಗಳೂರಿನಿಂದ ಮಂಗಳೂರಿಗೆ ಎಇಇಇ ಪರೀಕ್ಷೆ ಬರೆಯಲು ಚಿಕ್ಕಮಂಗಳೂರಿನ ನವೋದಯ ವಿದ್ಯಾಲಯದ ಸುಮಾರು 35 ಮಂದಿ ವಿದ್ಯಾರ್ಥಿಗಳು ಆಗಮಿಸಿದ್ದರು. ಪರೀಕ್ಷೆ ಮುಗಿದ ನಂತರ ಪಣಂಬೂರು ಬೀಚ್ ಗೆ ತೆರಳಿದ ವಿದ್ಯಾರ್ಥಿಗಳು ನೀರಿನಲ್ಲಿ ಆಡುತ್ತಿದ್ದು ಅಕಾಶ್ ಅನಿರೀಕ್ಷಿತವಾಗಿ ಬಂದ ಸಮುದ್ರದ ಅಲೆಗೆ ಸಿಕ್ಕಿ ಸೆಳೆಯಲ್ಪಟ್ಟು ನೀರಿನಲ್ಲಿ ಮುಳುಗಿದ್ದಾನೆ. ಈ ವೇಳೆ ಆಕಾಶ್ ಮುಳುಗುತ್ತಿದ್ದನ್ನು ಕಂಡ ಇತರೆ ವಿದ್ಯಾರ್ಥಿಗಳು ಕೂಗಿಕೊಂಡಿದ್ದಾರೆ. ಈ ವೇಳೆ ಅಲ್ಲೇ ಕಾರ್ಯನಿರ್ವಹಿಸುತ್ತಿದ್ದ ಪಣಂಬೂರಿನ ಜೀವ ರಕ್ಷಕ ದಳದ ಸಿಬಂದಿಗಳು ಅಕಾಶ್‌ನನ್ನು ನೀರಿನಿಂದ ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಆಕಾಶ್ ಸಾವನ್ನಪ್ಪಿದ್ದಾನೆ.