- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ

Siddaramaiah CM candidate [1]ಉಡುಪಿ : ಬಿಜೆಪಿಯ ಭದ್ರ ಕೋಟೆಯಾಗಿದ್ದ ಉಡುಪಿಯಲ್ಲಿ ಸ್ಥಳೀಯ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲೆ ರಾಜ್ಯದಲ್ಲೂ ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಿಶ್ವಾಸ ಹೊಂದಿರುವ ಉಡುಪಿ ಕಾಂಗ್ರೆಸ್ ಕಾರ್ಯಕರ್ತರು ಆಸ್ಪತ್ರೆಯಲ್ಲಿ ಗುಣಮುಖರಾಗುತ್ತಿರುವ ಸಿದ್ದರಾಮಯ್ಯ ನವರೆ ರಾಜ್ಯದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂಬುದಾಗಿ ಘೋಷಿಸಿದ್ದಾರೆ.

ಸೋಮವಾರ ಉಡುಪಿ ತಾಲುಕಿನ ಪರ್ಕಳದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಿದ್ದಾರಮಯ್ಯನವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯನವರೆ ಮುಖ್ಯಮಂತ್ರಿಯಾಗಬೇಕೆಂದು ಪ್ರಾರ್ಥಿಸಿ ದೇವಾಲಯದಲ್ಲಿ  ವಿಶೇಷ ಪೂಜೆ ಸಲ್ಲಿಸಿದರು.