[1]ಮಂಗಳೂರು : ಉಪ್ಪಿನಂಗಡಿ ಸಮೀಪದ ಪೆರ್ನೆ, ರಾಷ್ಟೀಯ ಹೆದ್ದಾರಿ 75ರಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅನಿಲ ಟ್ಯಾಂಕರ್ ದುರಂತದಲ್ಲಿ ಮಡಿದವರಿಗೆ ತಲಾ 1ಲಕ್ಷ ರೂಪಾಯಿಗಳ ಪರಿಹಾರವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಹರ್ಷ ಗುಪ್ತ ಅವರು ಘೋಷಿಸಿದ್ದಾರೆ.
ಶೇ.50 ಕ್ಕಿಂತಲೂ ಹೆಚ್ಚು ಸುಟ್ಟು ಗಾಯಗೊಂಡ ವ್ಯಕ್ತಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ಹಾಗೂ ಶೇ.50ಕ್ಕಿಂತಲೂ ಕಡಿಮೆ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ತಕ್ಷಣ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮತ್ತು ಸಂಬಂಧಪಟ್ಟ ಅನಿಲ ಸರಬರಾಜು ಕಂಪನಿಯಿಂದಲೂ ಸಿಗಬೇಕಾದ ಎಲ್ಲ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.