ಕುಂದಾಪುರ: ಟಿಪ್ಪರ್-ಒಮ್ನಿ ಡಿಕ್ಕಿ ಓರ್ವ ಸಾವು, ಮೂರು ಮಂದಿ ಗಂಭೀರ

4:15 PM, Tuesday, April 23rd, 2013
Share
1 Star2 Stars3 Stars4 Stars5 Stars
(No Ratings Yet)
Loading...

Accidentಕುಂದಾಪುರ: ಒಮ್ನಿ ಹಾಗು ಟಿಪ್ಪರ್ ನಡುವೆ ಸೊಮವಾರ ಕುಂದಾಪುರದ ಹಕ್ಲಾಡಿ ಸಮೀಪ ನಡೆದ ಅಪಘಾತದಲ್ಲಿ  ಒಬ್ಬಾತ ಮೃತಪಟ್ಟಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕಂದಾವರ ಉಳ್ಳೂರಿನ ರವೀಂದ್ರ ಪೂಜಾರಿ(28) ಎಂದು ಗುರುತಿಸಲಾಗಿದೆ.

ವಿದೇಶದಲ್ಲಿ ಉದ್ಯೋಗಿಯಾಗಿದ್ದ ಆಲೂರಿನ ಸಸಿಹಿತ್ಲು ನಿವಾಸಿ ಶಂಕರ ಪೂಜಾರಿ(೪೧) ಎರಡು ದಿನಗಳ ಹಿಂದೆ ರಜೆ ನಿಮಿತ್ತ ಮುಂಬೈನಲ್ಲಿದ್ದ ತನ್ನ ಪತ್ನಿ ಸರೋಜ(೩೭)  ಹಾಗು ಪುತ್ರಿಯರಾದ ಸ್ವಪ್ನ(೧೧), ಸ್ವಯಂ(೫) ರೊಂದಿಗೆ ಊರಿಗೆ ಮರಳಿದ್ದರು. ಸೋಮವಾರ ಹೆಂಡತಿ ಸರೋಜಾ, ಮಕ್ಕಳಾದ ಸಪ್ನಾ(೧೧) ಮತ್ತು ಸ್ವಯಂ(೫) ಹಾಗು ಪತ್ನಿಯ ಸೋದರ ಕಂದಾವರ ಸಮೀಪದ ಉಲ್ಲೂರು ನಿವಾಸಿ ರವೀಂದ್ರ ಪೂಜಾರಿ ಯವರೊಂದಿಗೆ ಆಲೂರು ದೇವಸ್ಥಾನಕ್ಕೆ ಹೋಗುತ್ತಿದ್ದ ವೇಳೆ ಹಕ್ಲಾಡಿ ರಾಮಮಂದಿರದ ಸಮೀಪ ಎದುರಿನಿಂದ ಮರಳು ತುಂಬಿಸಿಕೊಂಡು ಬಂದ ಟಿಪ್ಪರ್ ಒಮ್ನಿ ಗೆ ಡಿಕ್ಕಿ ಹೋಡೆದಿದ್ದು ಡಿಕ್ಕಿಯ ರಭಸಕ್ಕೆ ಒಮ್ನಿ ಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಇದನ್ನು ಚಲಾಯಿಸುತ್ತಿದ್ದ ರವೀಂದ್ರ ಪೂಜಾರಿ ಸ್ಥಳದಲ್ಲೆ ಮೃತಪಟ್ಟರೆ, ಉಳಿದವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಗಂಗೊಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English