- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ನಕಲಿ ದಾಖಲೆ ಸೃಷ್ಟಿಸಿ ವಂಚನೆ ಹಿನ್ನಲೆಯಲ್ಲಿ ವಿದ್ಯಾರ್ಥಿ ಬಂಧನ

Fazil [1]ಕಾಸರಗೋಡು : ನಕಲಿ ದಾಖಲೆ ಸೃಷ್ಟಿಸಿ ವಂಚನೆ ನಡೆಸಿರುವ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಿಬಿಎಂ ಓದುತ್ತಿರುವ ತಿರುವನಂತಪುರ ಮೂಲದ ಫಾಸಿಲ್ ಎಂಬಾತನನ್ನು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮಂಜೇಶ್ವರ ಹೊಸಂಗಡಿಯ ಅಬ್ದುಲ್ ಸುನೈರ್ ಮುನೀರ್ ಎಂಬುವವರ ಡ್ರೈವಿಂಗ್ ಲೈಸನ್ಸನ್ನು ದುರುಪಯೋಗಪಡಿಸಿಕೊಂಡ ಆರೋಪಿ ಫಸೀಲ್, ಸುನೈರ್ ನ ಹೆಸರಲ್ಲಿ ಬ್ಯಾಂಕ್ ನಕಲಿ ದಾಖಲೆ ಸೃಷ್ಟಿಸಿ  ಖಾತೆ ತೆರೆದು ಬ್ಯಾಂಕ್ ನಿಂದ ಹಣ ಪಡೆದು ವಂಚನೆ ನಡೆಸಿದ್ದಾನೆ. ಆರೋಪಿ ಬ್ಯಾಂಕ್ ಗೆ ಸುಮಾರು ೩.೫೦ ಲಕ್ಷ ರೂಪಾಯಿ ವಂಚಿಸಿದ್ದಾಗಿ ತಿಳಿದು ಬಂದಿದೆ. ಈ ಬಗ್ಗೆ ಅಬ್ದುಲ್ ಸುನೈರ್ ಮುನೀರ್ ನೀಡಿದ ದೂರಿನ ಹಿನ್ನಲೆಯಲ್ಲಿ ಈತನನ್ನು ಪೊಲೀಸರು ಬಂಧಿಸಿದ್ದಾರೆ.