ರಾಜ್ಯ ಹೆದ್ದಾರಿ ಆಲಂಕಾರು ಬಳಿ ಅಪಘಾತ, ಬೈಕ್ ಸಹಸವಾರನ ಸಾವು, ಸವಾರ ಗಂಭೀರ

1:08 PM, Tuesday, May 21st, 2013
Share
1 Star2 Stars3 Stars4 Stars5 Stars
(No Ratings Yet)
Loading...

Alankaru bike accidentಪುತ್ತೂರು : ಸೋಮವಾರ ಮಧ್ಯಾಹ್ನ ಉಪ್ಪಿನಂಗಡಿ- ಕಡಬ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಸಮೀಪ ಮಾಯಿಲ್ಗ ಎಂಬಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸಹಸವಾರ ಮೃತಪಟ್ಟಿದ್ದು, ಬೈಕ್ ಸವಾರ ಗಂಬೀರವಾಗಿ ಗಾಯಗೊಂಡಿದ್ದಾರೆ.

ಆಲಂಕಾರು ಗ್ರಾಮದ ಕೇಪುಳು ದಿ.ಕೃಷ್ಣಪ್ಪ ಪೂಜಾರಿ ಅವರ ಪುತ್ರ ದಿವಾಕರ (30) ಸಾವಿಗೀಡಾದ ದುರ್ದೈವಿಯಾಗಿದ್ದಾರೆ. ದಿವಾಕರ ಮತ್ತು ಅವರ ಸಹೋದರ ದಿನೇಶ  ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುವ ನಿಮಿತ್ತ ಆಲಂಕಾರಿನಿಂದ ಕುಂತೂರು ಕಡೆ ಹೊರಟ್ಟಿದ್ದು ಬೈಕ್ ಮಾಯಿಲ್ಗ ಸಮೀಪದ ತಿರುವುನಲ್ಲಿಗೆ ತಲುಪುತ್ತಿದ್ದಂತೆ ಎದುರಿನಿಂದ ಬಂದ ಟಿಪ್ಪರ್  ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ದಿವಾಕರ್ ರ ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸವಾರ ದಿನೇಶ ಗಂಭೀರವಾಗಿ ಗಾಯಗೊಂಡಿದ್ದು, ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ದಿವಾಕರ ಪತ್ನಿ ಹಾಗು 2 ವರ್ಷದ ಪುತ್ರ ನನ್ನು ಅಗಲಿದ್ದಾರೆ. ಭಾನುವಾರ ಇದೇ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸಾವಿಗೀಡಾಗಿದ್ದು, ಮರುದಿನವೇ ಈ ಘಟನೆ ನಡೆದಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English