[1]ಮಂಗಳೂರು : ಮಂಗಳವಾರ ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕೊಟ್ಟಾರ ಸಮೀಪದ ಬಂಗ್ರಕೂಳೂರು ಬಳಿಯ ಕಿರು ಸೇತುವೆಯ ತಡೆಗೋಡೆಗೆ ಹೊಡೆದು ನಿಂತ ಘಟನೆ ನಡೆದಿದೆ.
ಹುಬ್ಬಳ್ಳಿಯಿಂದ ಹೊರಟ ಕೆ.ಎಸ್.ಆರ್.ಟಿ.ಸಿ ಬಸ್ ಮಂಗಳೂರಿನ ಕೂಳೂರು ಸಮೀಪಿಸುತ್ತಿದ್ದಂತೆ ಬಸ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು, ಬಸ್ ನ ಸ್ಟೀರಿಂಗ್ ವ್ಹೀಲ್ ತುಂಡಾಗಿದೆ. ಚಾಲಕ ಬಸ್ ನ್ನು ನಿಧಾನವಾಗಿ ಚಲಾಯಿಸಿಕೊಂಡು ಬಂದರೂ ಬಂಗ್ರಕೂಳೂರು ಸಮೀಪ ಸುರಿದ ಮಳೆಯಿಂದಾಗಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಕಿರು ಸೇತುವೆಗೆ ಅಪ್ಪಳಿಸಿದೆ. ಸುಮಾರು 45 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್ ಸೇತುವೆಯಿಂದ ಕೆಳಗೆ ಬಿದ್ದಿದ್ದೆ ಆದಲ್ಲಿ ದೊಡ್ಡ ಅನಾಹುತವೊಂದು ಸಂಭವಿಸುತ್ತಿತ್ತು ಆದರೆ ಚಾಲನಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.