ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ಆರೋಪಿ, ಸೆರೆ

5:09 PM, Thursday, May 30th, 2013
Share
1 Star2 Stars3 Stars4 Stars5 Stars
(No Ratings Yet)
Loading...

CP Abdul Latifಕಾಸರಗೋಡು : ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾದ ಆರೋಪಿಯನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಿ ಕರೆದುಕೊಂಡು ಹೋಗುವಾಗ, ಪೊಲೀಸರ ಕಣ್ತಪ್ಪಿಸಿ ಪರಾರಿಯಾದಾತನನ್ನು ಬಂಧಿಸುವಲ್ಲಿ ಕಾಸರಗೋಡು ಪೊಲೀಸರು ಯಶಸ್ವಿಯಾಗಿದ್ದಾರೆ. ಚಟ್ಟಂಚಾಲ್ ತೆಕ್ಕಿಲ್ ನ ಸಿ.ಎ.ಅಬ್ದುಲ್ ಲತೀಫ್ (43) ಪರಾರಿಯಾದ ಆರೋಪಿಯಾಗಿದ್ದಾನೆ.

ಕಳವು ಪ್ರಕರಣದ ಹಿನ್ನಲೆಯಲ್ಲಿ ಕಣ್ಣೂರು ಸೆಂಟ್ರಲ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಲತೀಫ್ ನನ್ನು ಪೊಲೀಸರು ಸೋಮವಾರದಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ವಾಪಾಸ್ ಕಣ್ಣೂರಿಗೆ ಕರೆದುಕೊಂಡು ಹೋಗುವಾಗ ವಿದ್ಯಾನಗರ ಬಸ್ ನಿಲ್ದಾಣದ ಬಳಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದನು. ಈ ವೇಳೆ ಪರಾರಿಯಾದ ಆರೋಪಿ ಕಾನತ್ತೂರಿನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಈ ಪ್ರದೇಶದಲ್ಲಿ ಕಾರ್ಯಚರಣೆ ನಡೆಸಿದ್ದಾರೆ. ಈ ವೇಳೆ ಪೊಲೀಸರ ಕಣ್ತಪ್ಪಿಸಿ ಆಟೋ ಮೂಲಕ ಪರಾರಿಯಾಗಲೆತ್ನಿಸಿದ ಲತೀಫ್ ನನ್ನು ಬಂಧಿಸಿದ್ದು ಆತನನ್ನು ಕಣ್ಣೂರು ಜೈಲಿನಲ್ಲಿಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English