ಜನಪರವಾಗಿ ಕರ್ತವ್ಯ ನಿರ್ವಹಿಸಿ: ಸಚಿವ ಖಾದರ್

8:37 PM, Friday, June 7th, 2013
Share
1 Star2 Stars3 Stars4 Stars5 Stars
(5 rating, 4 votes)
Loading...

Khader Zilla Panchayat ಮಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು, ರಸ್ತೆ ಹಾಗೂ ಪ್ರಾಕೃತಿಕ ವಿಕೋಪದಲ್ಲಿ ಸಂಭವಿಸಿದ ಹಾನಿಗೆ ತುತರ್ು ಪರಿಹಾರ ನೀಡುವುದು ಇಂಜಿನಿಯರ್ ವಿಭಾಗದ ಹೊಣೆ ಎಂದು ಆರೋಗ್ಯ ಸಚಿವ ಶ್ರೀ ಯು ಟಿ ಖಾದರ್ ಹೇಳಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ನೀರು, ನೈರ್ಮಲ್ಯ ಹಾಗೂ ರಸ್ತೆಗಳಿಗೆ ಆದ್ಯತೆ ನೀಡಿ. ನಮ್ಮ ಗ್ರಾಮ ನಮ್ಮ ರಸ್ತೆಯಡಿ ರಸ್ತೆಗಳಿಗಾಗಿ ಬಿಡುಗಡೆಯಾದ ಅನುದಾನವನ್ನು ಸದ್ಬಳಕೆ ಮಾಡಿ ಜನರ ಸಮಸ್ಯೆಗೆ ಸ್ಪಂದಿಸಿ. ಮಳೆಗಾಲದಲ್ಲಿ ರಸ್ತೆ ಇಲ್ಲದೆ ಗ್ರಾಮೀಣರು ಒದ್ದಾಡಬಾರದು. ಅವರಿಗೆ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಆದ್ಯತೆ ನೀಡಿ ಎಂದರು.

Khader Zilla Panchayat

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ನೀರು ಪೂರೈಸಿ. ಯೋಜನೆಗಳನ್ನು ಅರ್ದಂಬರ್ಧ ಮಾಡಿ ಕೈಬಿಡದೆ ಸಂಪೂರ್ಣಗೊಳಿಸಿ. ಯಾವುದಕ್ಕೂ ಜನ ಇಲ್ಲ ಎಂಬ ಸಬೂಬು ನೀಡದೆ ವಿವಿಧ ಕಾಮಗಾರಿಗಳನ್ನು ಒಂದೇ ಏಜೆನ್ಸಿಗೆ ನೀಡುವ ಮೂಲಕವಾದರೂ ಕೆಲಸ ಮಾಡಿಸಿ ಎಂದು ಮಂಗಳೂರು ಹಾಗೂ ಬಂಟ್ವಾಳ ವ್ಯಾಪ್ತಿಯ ಕಾಮಗಾರಿಗಳ ಮಾಹಿತಿ ಪಡೆದು ಸಂಪೂರ್ಣಗೊಳಿಸಲು ಸಮಯಮಿತಿ ನಿಗದಿ ಪಡಿಸಿದರು. ಸಭೆಯಲ್ಲಿ ಇಂಜಿನಿಯರ್ ವಿಭಾಗದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Khader Zilla Panchayat

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English