ವೆನ್ಲಾಕ್ ಆಸ್ಪತ್ರೆಯಲ್ಲಿ ಜನಸ್ನೇಹಿ ವಾತಾವರಣವಿರಲಿ: ಯು.ಟಿ.ಖಾದರ್

6:30 PM, Saturday, June 15th, 2013
Share
1 Star2 Stars3 Stars4 Stars5 Stars
(No Ratings Yet)
Loading...

UT Khader Visits Lady Ghosen Hospitalಮಂಗಳೂರು  : ಮಾನ್ಯವಾಗಿ ಜನರು ಸರ್ಕಾರಿ ಶಾಲೆ ಹಾಗೂ ಆಸ್ಪತ್ರೆ ಎಂದರೆ ಅನುಮಾನದಿಂದ ದೂರ ಉಳಿಯುತ್ತಾರೆ. ಆದ್ದರಿಂದ  ಅವರಲ್ಲಿ ವಿಶ್ವಾಸ ತುಂಬುವ, ಪ್ರೀತಿ ಸೌಹಾರ್ದಮಯ ಪರಿಸರ ನಿರ್ಮಾಣದ ಅಗತ್ಯ ಸರ್ಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿರಬೇಕೆಂದು ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ ಶ್ರೀ ಯು.ಟಿ.ಖಾದರ್ ಅವರು ತಿಳಿಸಿದ್ದಾರೆ.

ಅವರು ಇಂದು ವೆನ್ಲಾಕ್ ಆಸ್ಪತ್ರೆಗೆ ಭೇಟಿ ನೀಡಿ, ಡೆಂಗಿ ಹಾಗೂ ಮಲೇರಿಯಾ ರೋಗ ಹರಡದಂತೆ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನಗೋಪಾಲ ಅವರೊಂದಿಗೆ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.

ವೆನ್ಲಾಕ್ ಆಸ್ಪತ್ರೆಯಲ್ಲಿ ವೆಂಟಿಲೇಷನ್(ಜೀವರಕ್ಷಕ ಕೃತಕ ಉಸಿರಾಟ) ಸೌಲಭ್ಯ ಹೆಚ್ಚ್ಚಿಸುವುದು` ಡಿ’ ಗ್ರೂಪ್ ಹಾಗೂ ನರ್ಸ್ ಗಳನ್ನು ನೇಮಕಾತಿ ಮಾಡಿಕೊಳ್ಳಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿ ಸುವುದಾಗಿ ತಿಳಿಸಿದರು. ಬಿಪಿಎಲ್ ಕಾರ್ಡ್ ರೋಗಿಗಳಿಗೆ ಸರ್ಕಾರದಿಂದ ಸರಬರಾಜಿಲ್ಲದ ಔಷಧಿಗಳನ್ನು ಹೊರಗಡೆಯಿಂದ ತರಿಸಿದಲ್ಲಿ ಅದರ ವೆಚ್ಚವನ್ನು ಮರುಪಾವತಿಸುವಂತೆ ಸೂಚಿಸಿದರು. ಲೇಡಿಗೋಷನ್ ಆಸ್ಪತ್ರೆಯಲ್ಲಿ ರೂ.10 ಕೋಟಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ರೇಡಿಯೋಥೆರಪಿ ಚಿಕಿತ್ಸಾ ಘಟಕ ಆರಂಭಿಸಲಾಗುವುದೆಂದರು.

ಸಭೆಯಲ್ಲಿ ಜಿಲ್ಲಾ ಪ್ರಭಾರ ಸರ್ಜನ್ ಡಾ.ಈರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಓ.ಆರ್.ಶ್ರೀರಂಗಪ್ಪ, ಆರೋಗ್ಯ ಇಲಾಖೆ ಆಯುಕ್ತ ವಿಜಯಕುಮಾರ್ ಜೋಗಿ ಮುಂತಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English