ಕಣ್ಣೂರಿನ ಗ್ಯಾರೇಜ್ ನಲ್ಲಿ ಗ್ಯಾಸ್ ಸಿಲಿಂಡರ್ ಗೆ ಬೆಂಕಿ, ತಪ್ಪಿದ ಅನಾಹುತ

4:52 PM, Tuesday, July 9th, 2013
Share
1 Star2 Stars3 Stars4 Stars5 Stars
(No Ratings Yet)
Loading...

padil garege ಮಂಗಳೂರು: ಕಣ್ಣೂರಿನ ಕೊಡಕ್ಕಲ್ ನ ಹಿಂದೂಸ್ತಾನ್ ಅಟೋ ವರ್ಕ್ಸ್ ನಲ್ಲಿ ವೆಲ್ಡಿಂಗ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ಸಿಲಿಂಡರ್ ಗೆ ಬೆಂಕಿ ತಗುಲಿ ಬೆಂಕಿ ಹತ್ತಿಕೊಂಡ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಗ್ಯಾಸ್ ಸಿಲಿಂಡರ್ ಸ್ಫೋಟಗೊಳ್ಳದಿದ್ದ ಕಾರಣ ದೊಡ್ಡ ದುರಂತವೊಂದು ತಪ್ಪಿದೆ. ಕಾರ್ಬೊಹೈಡ್ರೆಡ್ ಗ್ಯಾಸ್ ಇರುವ ಸಿಲಿಂಡರ್ ಗೆ ಬೆಂಕಿ ಹತ್ತಿಕೊಂಡ ಕೂಡಲೇ ಗ್ಯಾರೇಜ್ ಸಿಬ್ಬಂದಿಗಳೇ  ನೀರು ಹಾಕಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.

ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿ 40 ನಿಮಿಷ ಕಳೆದರೂ ಘಟನಾ ಸ್ಥಳಕ್ಕೆ ಬರಲಿಲ್ಲ ಎಂದು ಆಟೋ ವರ್ಕ್ಸ್ ನ ಸಿಬ್ಬಂದಿ ತಿಳಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English