ಮಣಿಪಾಲ ರಿಕ್ಷಾದಲ್ಲಿ ಗ್ಯಾಂಗ್ ರೇಪ್ ; ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

2:24 PM, Monday, July 15th, 2013
Share
1 Star2 Stars3 Stars4 Stars5 Stars
(4 rating, 5 votes)
Loading...

Gang Rapist ಉಡುಪಿ: ಜೂನ್ 20ರ ರಾತ್ರಿ ನಡೆದ ಮಣಿಪಾಲ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಾದ ಯೋಗೀಶ, ಹರಿಪ್ರಸಾದ್ ಮತ್ತು ಆನಂದ ನನ್ನು ಶಿವಮೊಗ್ಗ ಜೈಲಿನಿಂದ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು.

ಸೋಮವಾರ ಬೆಳಗ್ಗೆ ಆರೋಪಿಗಳನ್ನು  ಉಡುಪಿಯ ಜಿಲ್ಲಾ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನವನ್ನು ಜುಲೈ 29ರ ತನಕ ವಿಸ್ತರಿಸಿದರು.

ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಲಿದೆಯೆಂದು ತನಿಖಾಧಿಕಾರಿಗಳು ಹೇಳಿರುವ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ಯೋಗೀಶ ಮತ್ತು ಹರಿಪ್ರಸಾದ್ ನ ಸೋದರರಾದ ಹರೀಂದ್ರ ಮತ್ತು ಬಾಲಚಂದ್ರ ಅವರಿಗೆ ಕೂಡ ಜುಲೈ 29ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆದರೆ ಅವರನ್ನು ಕೋರ್ಟಿಗೆ ಹಾಜರುಪಡಿಸಲಿಲ್ಲ. ಅವರಿಬ್ಬರನ್ನು ಹಿರಿಯಡ್ಕ ಜೈಲಿಗೆ ಕಳುಹಿಸಲಾಗಿದೆ.

ಆರೋಪಿಗಳನ್ನು ಮತ್ತೆ ಶಿವಮೊಗ್ಗ ಜೈಲಿಗೆ ಕಳುಹಿಸಿಕೊಡಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English