- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಪೊಳಲಿ ದ್ವಾರದ ಬಳಿ ಅಪರಿಚಿತ ವಾಹನ ಡಕ್ಕಿ ಹೊಡೆದು ವೈದ್ಯ ಮೃತ್ಯು

Doctor [1]ಮಂಗಳೂರು : ಮಂಗಳೂರು-ಮೂಡಬಿದಿರೆಯ ಹೆದ್ದಾರಿಯಲ್ಲಿರುವ  ಪೊಳಲಿ ದ್ವಾರದ ಬಳಿ ಅಪರಿಚಿತ ವಾಹನವೊಂದು ಬೈಕ್ ನಲ್ಲಿ ಹೋಗುತ್ತಿದ್ದ  ಪಾಂಡೇಶ್ವರದ ವೈದ್ಯರೊಬ್ಬರಿಗೆ  ಡಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ  ಮೃತ  ಘಟನೆ ಶುಕ್ರವಾರ ನಡೆದಿದೆ.

ಮಂಗಳೂರಿನ ಪಾಂಡೇಶ್ವರದ ನಿವಾಸಿ  ಡಾ.ಹರ್ಷವರ್ಧನ ಗಣೇಶ್ ಉಳ್ಳಾಲ್ ಮೃತಪಟ್ಟ ದುರ್ದೈವಿ.  ಗುರುವಾರ ಹರ್ಷವರ್ಧನ್ ತನ್ನ ಮೂವರು ಗೆಳೆರೊಂದಿಗೆ ಗಂಜಿಮಠದಲ್ಲಿರುವ ಗೆಳೆಯನ ಮನೆಗೆ ಹೊಗಿದ್ದರು. ಶುಕ್ರವಾರ ಮುಂಜಾನೆ ಮೂರು ಮಂದಿ ಗೆಳೆಯರು ಕಾರಿನಲ್ಲಿ ಹೊರಟರು, ಹರ್ಷವರ್ಧನ್ ಮಾತ್ರ ಗಂಜಿಮಠದಿಂದ ಮಂಗಳೂರಿಗೆ ಬೈಕ್ ನಲ್ಲೇ ತೆರಳಿದರು. ಮಂಗಳೂರು-ಮೂಡಬಿದಿರೆ ರಸ್ತೆಯ ಪೊಳಲಿ ದ್ವಾರದ ತೆಂಕುಳಿಪಾಡಿ ಗ್ರಾಮದ ಬಂಗ್ಲೆಗುಡ್ಡೆ ಕ್ರಾಸ್ ನ ಬಳಿ ಅವರ ಬೈಕ್ ಗೆ ಯಾವುದೋ ವಾಹನ ಡಿಕ್ಕಿ ಹೊಡೆದು ಪರಾರಿಯಾಯಿತು. ಪರಿಣಾಮ ಅವರು ರಸ್ತೆಗೆ ಬಿದ್ದು ತಲೆ ಹಾಗೂ ಬಲಭುಜಕ್ಕೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟರು.

ಹರ್ಷವರ್ಧನ್ ಕೆ.ಎಂ.ಸಿ.ಹಾಗೂ ಎ.ಜೆ. ಆಸ್ಪತ್ರೆಯಲ್ಲಿ ಕೆಲಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಸ್ನಾತಕೋತ್ತರ ಪದವಿಗೆ ಪ್ರವೇಶ ಪರೀಕ್ಷೆಗೆ ಬರೆಯಲು ತಯಾರಿ ನಡೆಸಿದ್ದರು ಎಂದು ತಿಳಿದು ಬಂದಿದೆ.

ಬೈಕ್ ಗೆ  ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು, ಬಜಪೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.