ಕೌಟುಂಬಿಕ ಆಸ್ತಿ ವಿವಾದ ; ಪಾಲಿಕೆಯ ವಾಹನ ಚಾಲಕನಿಗೆ ಮಾರಣಾಂತಿಕ ಹಲ್ಲೆ

10:20 AM, Sunday, July 21st, 2013
Share
1 Star2 Stars3 Stars4 Stars5 Stars
(4 rating, 5 votes)
Loading...

MCC driverಮಂಗಳೂರು : ಕೌಟುಂಬಿಕ ಆಸ್ತಿ ವಿವಾದದ ಹಿನ್ನಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ವಾಹನ ಚಾಲಕ ಅಶೋಕನಗರದ ರೋಹಿತ್‌ (26) ಅವರನ್ನು ಶನಿವಾರ ಬೆಳಗ್ಗೆ ಬೈಕ್‌ನಲ್ಲಿ ಬಂದ ನಾಲ್ಕು ಮಂದಿ ಅಪರಿಚಿತರು ಮಾರಕಾಯುಧಗಳಿಂದ ಹಲ್ಲೆ ಮಾಡಿ ಕೊಲೆ ಯತ್ನ ನಡೆಸಿದ್ದಾರೆ.

ರೋಹಿತ್‌ ಅವರು ಬೆಳಗ್ಗೆ ಪಾಲಿಕೆಯ ಅಧಿಕಾರಿಗಳನ್ನು ಕರೆ ತರಲು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿದ ನಾಲ್ವರು ಅಪರಿಚಿತರು ಲೇಡಿಹಿಲ್‌ನಲ್ಲಿ ತಡೆದು ನಿಲ್ಲಿಸಿ ಮಾರಕಾಯುಧಗಳಿಂದ ಹಲ್ಲೆ ನಡೆಸಿದರು  ಎಂದು ಆರೋಪಿಸಲಾಗಿದೆ.

ಗಾಯಾಳು ರೋಹಿತ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬರ್ಕೆ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English