ಸಿಬಿಎಸ್ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಹಿಂದೂ ಜನಜಾಗೃತಿ ಸಮಿತಿ ಖಂಡನೆ

6:52 PM, Monday, August 5th, 2013
Share
1 Star2 Stars3 Stars4 Stars5 Stars
(No Ratings Yet)
Loading...

Hindu Jana Jagruthiಮಂಗಳೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಭಾನುವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಎದುರು ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅವಮಾನ ಮಾಡಿರುವುದನ್ನುದು ಖಂಡಿಸಿ ಪ್ರತಿಭಟನೆ ಸಭೆ ನಡೆಯಿತು.

ಜನಜಾಗೃತಿ ಸಮಿತಿಯ ಸುಕನ್ಯ ಆಚಾರ್ಯ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಸಿಬಿಎಸ್ ಸಿ ಪಠ್ಯದಲ್ಲಿ ಝಾನ್ಸಿ ರಾಣಿಗೆ ಅಪಮಾನ ವಾಗುವಂತೆ ಚಿತ್ರಿಸಲಾಗಿದೆ.  ಇದಕ್ಕೆ ಕಾರಣರಾದವರ ವಿರುದ್ದ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಲೆಕ್ಕಿಸದೆ ಹೋರಾಡಿದ ಮಹಿಳೆಯ ಅವಮಾನಿಸಿದ್ದು ಖಂಡನೀಯ ಎಂದು ಅವರು ಹೇಳಿದರು.

ಉದ್ಯಮಿಜಿಲ್ಲಾ ಸಂಚಾಲಕ ಪ್ರಸನ್ನ ಕಾಮತ್, ಅನಂತ್ ಕಾಮರ್, ವಕೀಲ ಸತೀಶ್ ಭಟ್, ನಾಗೇಶ್ ವಾಮಂಜೂರು, ಸುಜಿತ್ ಕುಮಾರ್ ಕಾವೂರ್, ಶ್ರೀರಾಮಸೇನೆ ಮತ್ತು ಬಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English