ಈರುಳ್ಳಿ ಬೆಲೆ ಏರಿಕೆಗೆ ಅಕ್ರಮ ದಾಸ್ತಾನು ಕಾರಣ: ಪವಾರ್

3:07 PM, Wednesday, October 23rd, 2013
Share
1 Star2 Stars3 Stars4 Stars5 Stars
(4 rating, 6 votes)
Loading...

pavar

ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಲು ಅಕ್ರಮ ದಾಸ್ತಾನು ಕಾರಣ ಎಂದು ಕೇಂದ್ರ ಕೃಷಿ ಸಚಿವ ಶರದ್ ಪವಾರ್ ಅವರು ಬುಧವಾರ ಹೇಳಿದ್ದಾರೆ.

ಇಂದು ನಗರದಲ್ಲಿ ನಡೆದ 8ನೇ ರಾಷ್ಟ್ರೀಯ ಕೃಷಿ ವಿಜ್ಞಾನ ಸಮ್ಮೇಳನದಲ್ಲಿ ಮಾತನಾಡಿಡ ಪವಾರ್, ಅಕ್ರಮ ದಾಸ್ತಾನು ಈರುಳ್ಳಿ ಬೆಲೆ ಏರಿಕೆಗೆ ಕಾರಣವಾಗಿದ್ದು, ಕೃತಕ ಅಭಾವ ಸೃಷ್ಟಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಅಲ್ಲದೆ ಮುಂದಿನ ಎರಡು, ಮೂರು ವಾರಗಳಲ್ಲಿ ಈರುಳ್ಳಿ ಬೆಲೆ ಇಳಿಕೆಯಾಗಲಿದೆ ಎಂದು ಭರವಸೆ ನೀಡಿದರು.

ಇದೇ ವೇಳೆ ರಾಜ್ಯದಲ್ಲಿ ಕಾಲುಬಾಯಿ ರೋಗದಿಂದ ಸಾವನ್ನಪ್ಪಿದ ಜಾನುವಾರಗಳಿಗೆ ಪರಿಹಾರದ ಹಣ ಭರಿಸಲು ಕೇಂದ್ರ ಸರ್ಕಾರ ಸಿದ್ಧವಿದ್ದು, ರಾಜ್ಯ ಸರ್ಕಾರಕ್ಕೆ ಪರಿಹಾರದ ಹಣ ನೀಡುವುದಾಗಿ ಹೇಳಿದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English