- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಸಮಿತಿಯಿಂದ ಕಾಲ್ನಡಿಗೆ ಜಾಥಾ

Yuva Morcha [1]

ಮಂಗಳೂರು: ಬಿಜೆಪಿ ಯುವಮೋರ್ಚಾ ಮಂಗಳೂರು ದಕ್ಷಿಣ ಸಮಿತಿ ವತಿಯಿಂದ ನಗರದ ನೆಹರೂ ಮೈದಾನದಿಂದ ಕೊಡಿಯಾಲ್‌ಬೈಲ್‌ನಲ್ಲಿರುವ ಬಿಜೆಪಿ ಕಚೇರಿವರೆಗೆ, ಬೆಂಗಳೂರಿನಲ್ಲಿ ನ. 17 ರಂದು ನಡೆಯಲಿರುವ ‘ಭಾರತ ಗೆಲ್ಲಿಸಿ’ ಶಕ್ತಿಶಾಲಿ ಭಾರತಕ್ಕಾಗಿ ಬೃಹತ್‌ ಸಮಾವೇಶದ ಹಿನ್ನೆಲೆಯಲ್ಲಿ ಕಾಲ್ನಡಿಗೆ ಜಾಥಾ ನ15, ಶುಕ್ರವಾರ ನಡೆಯಿತು.

ಜಾಥಾವನ್ನು ಉದ್ದೇಶಿಸಿ ಮಾತನಾಡಿದ ಸಂಸದ ನಳಿನ್‌ಕುಮಾರ್‌ ಕಟೀಲು ಮಕ್ಕಳಿಂದ ಹಿಡಿದು ಮುದುಕರ ವರೆಗೆ ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂದು ಉತ್ಸುಕರಾಗಿದ್ದಾರೆ. ಮೋದಿ ಅಲೆ ಸರ್ವ ಭಾರತೀರ ಹೃದಯದಲ್ಲಿ ಮೋದಿ ಮಿಳಿತಗೊಂಡಿದ್ದಾರೆ ಎಂದು ಹೇಳಿದರು.

ಗುಜರಾತ್‌ನಲ್ಲಿ ಮೋದಿ ಮಾಡಿದ ಅಭಿವೃದ್ಧಿ ಇಂದು ದೇಶಕ್ಕೆ ಮಾದರಿಯಾಗಿದೆ , ಅವರು ದೇಶವನ್ನು ಸಮರ್ಥವಾಗಿ ನಿಭಾಯಿಸಿ ಅಭಿವೃದ್ಧಿ ಪಥದಲ್ಲಿ ಕೊಂಡಯ್ಯಬಲ್ಲರು ಎಂಬ ವಿಶ್ವಾಸ ದೇಶದ ಪ್ರತೀ ಪ್ರಜೆಗೂ ಇದೆ ಎಂದು ಅವರು ಅಭಿಪ್ರಾಯಪಟ್ಟರು.

ಶಾದಿಭಾಗ್ಯ ಯೋಜನೆಯ ಮೂಲಕ ರಾಜ್ಯ ಸರಕಾರವು ಹಿಂದೂಗಳಿಗೆ ಅನ್ಯಾಯ ಮಾಡಿದೆ. ಯುಪಿಎ ಸರಕಾರವು ಕೇವಲ ಮತದ ಮೇಲೆ ಆಸೆ ಇಟ್ಟು ಸರಕಾರ ನಡೆಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರವು ಕೇವಲ ಧರ್ಮ, ಜಾತಿಗಳನ್ನು ಮುಂದಿಟ್ಟುಕೊಂಡು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಲೇವಡಿ ಮಾಡಿದರು.

ರವಿಶಂಕರ್‌ ಮಿಜಾರ್‌, ಬಿಜೆಪಿ ಮಂಗಳೂರು ದಕ್ಷಿಣ ಅಧ್ಯಕ್ಷ ,ಕಿಶೋರ್‌ ಕುಮಾರ್‌ ಪುತ್ತೂರು, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಕ್ಯಾ| ಬ್ರಿಜೇಶ್‌ ಚೌಟ, ಜಿಲ್ಲಾ ಪ್ರ. ಕಾರ್ಯದರ್ಶಿ, ಸಂದೀಪ್‌ ಶೆಟ್ಟಿ, ಯುವಮೋರ್ಚಾ ದಕ್ಷಿಣ ಅಧ್ಯಕ್ಷ, ಮಹೇಶ್‌ ಎಂ.ಆರ್‌. ಪ್ರ. ಕಾರ್ಯದರ್ಶಿ , ನಾಯಕರಾದ ರಾಜೇಶ್‌ ನಾಯಕ್‌, ಕುಮಾರ್‌ ಆಳ್ವ, ರಕ್ಷಿತ್‌ ಕೊಟ್ಟಾರಿ, ಬಿಜೆಪಿ ನಾಯಕ ಶ್ರೀಕರ ಪ್ರಭು ಮೊದಲಾದವರು ಉಪಸ್ಥಿತರಿದ್ದರು.

Yuva Morcha [2]

Yuva Morcha [3]

Yuva Morcha [4]

Yuva Morcha [5]

Yuva Morcha [6]

Yuva Morcha [7]

Yuva Morcha [8]

Yuva Morcha [9]