ಮಂಗಳೂರು : ಭಾನುವಾರ ಬೆಂಗಳೂರಿನಲ್ಲಿ ನಡೆದ ಮೋದಿ ಭಾಷಣ ಕುರಿತ್ತಂತೆ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ತಾ.18 ರಂದು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಿದ್ದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೂಜಾರಿ, ಮೋದಿಯವರೇ ನಿಮಗೆ ಮದುವೆ ಯಾಗಿದೆಯಾ? ನಿಮ್ಮ ಹೆಂಡತಿಯ ಹೆಸರೇನು? ಅವರು ನಿಮ್ಮೊಂದಿಗೆ ಇದ್ದಾರಾ? ಅವರೀಗ ಎಲ್ಲಿದ್ದಾರೆ? ಹೀಗೆ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದರು. ತಾಕತ್ತಿದ್ದರೆ ನನ್ನ ಪ್ರಶ್ನೆಗಳಿಗೆ ಉತ್ತರಿಸಿ ಎಂದು ನರೇಂದ್ರ ಮೋದಿಗೆ ಬಹಿರಂಗ ಸವಾಲು ಹಾಕಿದರು. ಮೋದಿ ಕೀಳು ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳಿದರು.
ಸೋನಿಯಾ ಗಾಂಧಿ ವಿಚಾರದಲ್ಲಿ ಮೋದಿ ವೈಯಕ್ತಿಕ ಟೀಕೆ ಮಾಡುತ್ತಿದ್ದಾರೆ. ಅವರ ಅಸೌಖ್ಯದ ವಿಚಾರದಲ್ಲಿ ಇಲ್ಲಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ಆದರೆ ನಾವು ಎಂದಿಗೂ ವೈಯಕ್ತಿಕ ಟೀಕೆ ಮಾಡೋದಿಲ್ಲ. ನಮ್ಮದೇನಿದ್ದರೂ ಕಾನೂನಿನ ಮೂಲಕ ನೇರ ದಾಳಿ. ಹಾಗಾಗಿ ನನ್ನ ಪ್ರಶ್ನೆಗೆ ಮೋದಿ ಉತ್ತರಿಸಲೇಬೇಕು. ಪಾರ್ಲಿಮೆಂಟ್ನಲ್ಲಿ ಅಧಿಕೃತವಾಗಿ ಪ್ರತಿಯೊಬ್ಬ ಅಭ್ಯರ್ಥಿಯೂ ತನ್ನ ಸ್ವ-ವಿವರ ಸಲ್ಲಿಸಬೇಕು. ಹೀಗಿರುವಾಗ ಮೋದಿ ತನ್ನ ಮದುವೆಯ ಬಗ್ಗೆ, ಪತ್ನಿಯ ಬಗ್ಗೆ ಮಾಹಿತಿ ನೀಡಬೇಕು. ಆದರೆ ಇದನ್ನೆಲ್ಲಾ ಬಚ್ಚಿಡುತ್ತಿರುವುದು ಯಾಕೆ ಎಂದು ಅವರು ಪ್ರಶ್ನಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಇಬ್ರಾಹಿಂ ಕೋಡಿಜಾಲ್, ವಿಜಯ್ ಕುಮಾರ್ ಶೆಟ್ಟಿ, ನಗೇಂದ್ರ ಹಾಗೂ ಅರುಣ್ ಕುವೆಲ್ಲೊ ಮತ್ತು ಮುಂತಾದವರು ಉಪಸ್ಥಿತರಿದ್ದರು.
Click this button or press Ctrl+G to toggle between Kannada and English