5.10 ಲಕ್ಷ ರೂ. ನಗದು ದೋಚಿದ ವ್ಯಕ್ತಿಯ ಬಂಧನ

3:17 PM, Saturday, December 7th, 2013
Share
1 Star2 Stars3 Stars4 Stars5 Stars
(No Ratings Yet)
Loading...

robber

ಮಂಗಳೂರು : ಕೇರಳ ಮೂಲದ ಕಣ್ಣೂರು ನಿವಾಸಿ ಅಯ್ಯಂವಾಡಿ ಎಂಬವರು ತನ್ನ ತಮ್ಮನ ಜೊತೆಯಲ್ಲಿ ಮಂಗಳೂರಿನ ಟೌನ್‌ಹಾಲ್ ಕಡೆಗೆ ನಡೆದು ಕೊಂಡು ಹೋಗುತ್ತಿದ್ದಾಗ ಓರ್ವ ವ್ಯಕ್ತಿ ಬಲವಂತವಾಗಿ  ಎಳೆದು ಪರಾರಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ಮಂಗಳೂರಿನಲ್ಲಿ ನಡೆದಿದೆ.

ಲಕ್ಷಾಂತರ ರೂ. ನಗದು ದೋಚಿದ್ದ ಆರೋಪಿಯನ್ನು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಇಟ್ಟಂಗಿಯ ಓಂಕಾರ ಶೆಟ್ಟಿ(30) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಅಯ್ಯಂವಾಡಿ ಅವರು ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದರು.

ನಿನ್ನೆ ಸಂಜೆ ಪಾಂಡೇಶ್ವರ ಇನ್ಸ್‌ಪೆಕ್ಟರ್  ದಿನಕರ್  ಶೆಟ್ಟಿಯವರು ಸಿಬ್ಬಂದಿಯೊಂದಿಗೆ ರೌಂಡ್ಸ್‌ನಲ್ಲಿದ್ದಾಗ ನೆಹರೂ ಮೈದಾನದ ಫುಟ್‌ಪಾತ್ ಬಳಿ ಸಂಶಯಾಸ್ಪದ ವ್ಯಕ್ತಿಯೊಬ್ಬ ಕಂಡು ಬಂದಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ವಿಚಾರಣೆ ನಡೆಸಿದಾಗ ಬ್ಯಾಗ್ ಕದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದು, ಬ್ಯಾಗ್ ಪಡೆದು ಪರಿಶೀಲನೆ ನಡೆಸಿದಾಗ 5 ಲಕ್ಷದ 10 ಸಾವಿರ ರೂ. ಇತ್ತೆನ್ನಲಾಗಿದೆ. ನಂತರ ಆರೋಪಿಯನ್ನು ಬಂಧಿಸಿ ನಗದನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಯನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English