ದ.ಕ ಜಿಲ್ಲಾಧಿಕಾರಿ ಎನ್‌. ಪ್ರಕಾಶ್‌, ಪೊಲೀಸ್‌ ಆಯುಕ್ತ ಮನೀಷ್‌ ಕರ್ಬೀಕರ್‌ ವರ್ಗಾವಣೆ

3:41 PM, Friday, December 13th, 2013
Share
1 Star2 Stars3 Stars4 Stars5 Stars
(5 rating, 5 votes)
Loading...

prakash Khabikar

ಮಂಗಳೂರು : ಸರಕಾರದ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್‌. ಪ್ರಕಾಶ್‌ ಹಾಗೂ ಮಂಗಳೂರು ಪೊಲೀಸ್‌ ಆಯುಕ್ತ ಮನೀಷ್‌ ಕರ್ಬೀಕರ್‌ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಎನ್‌. ಪ್ರಕಾಶ್‌ ಅವರು ದ.ಕ. ಜಿಲ್ಲಾಧಿಕಾರಿಯಾಗಿ 2012ರ ಡಿಸೆಂಬರ್‌ 3ರಂದು ಅಧಿಕಾರ ಸ್ವೀಕರಿಸಿದ್ದರು. ಅವರು ಕಾರ್ಮಿಕ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದಾರೆ. ಕರ್ಬೀಕರ್‌ ಅವರು 2012 ಸೆ. 20ರಂದು ಮಂಗಳೂರು ಪೊಲೀಸ್‌ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದರು. ಅವರನ್ನು ಬೆಂಗಳೂರಿಗೆ ಕೆಎಸ್‌ಆರ್‌ಪಿ ಐಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರಿಂದ ತೆರವಾದ ಮಂಗಳೂರು ಪೊಲೀಸ್‌ ಆಯುಕ್ತ ಹುದ್ದೆಗೆ ಬೆಂಗಳೂರಿನ ಬಂದೀಖಾನೆ ಐಜಿಪಿ ಆರ್‌. ಹಿತೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ಪ್ರಕಾಶ್‌ ಅವರಿಂದ ತೆರವಾದ ದ.ಕ. ಜಿಲ್ಲಾಧಿಕಾರಿ ಹುದ್ದೆಗೆ ಇನ್ನೂ ನೇಮಕಾತಿ ಆಗಿಲ್ಲ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English