ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ 2012ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಅರ್ಹರಾದವರನ್ನು ಆಯ್ಕೆ ಮಾಡಿದ್ದು, ಅವರ ಪಟ್ಟಿಯನ್ನು ಸಚಿವೆ ಉಮಾಶ್ರೀ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ.
ಆಯ್ಕೆಯಾದವರ ವಿವರ: ಸಂತ ಶಿಶುನಾಳ ಷರೀಫ ಪ್ರಶಸ್ತಿ- ಎಸ್. ಸೋಮಸುಂದರಂ, ಬೆಂಗಳೂರು; ಶ್ರೀನಿಜಗುಣ ಪುರಂದರ ಪ್ರಶಸ್ತಿ- ಪಂ. ಸಂಗಮೇಶ್ವರ ಗುರವ, ಧಾರವಾಡ; ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ- ಯು.ಭಾಸ್ಕರ ರಾವ್, ಬೆಂಗಳೂರು; ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ- ಡಾ.ಬಿ.ಎನ್.ಸುಮಿತ್ರಾಬಾಯಿ, ಬೆಂಗಳೂರು; ಕುಮಾರವ್ಯಾಸ ಪ್ರಶಸ್ತಿ- ಮಾರ್ಕಂಡೇಯ ಅವಧಾನಿ, ಶಿವಮೊಗ್ಗ.
ಪ್ರತಿ ಪ್ರಶಸ್ತಿಯು ತಲಾ ರು. 3 ಲಕ್ಷ ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ದಿನಾಂಕವನ್ನು ಸದ್ಯದಲ್ಲಿಯೇ ಘೋಷಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Click this button or press Ctrl+G to toggle between Kannada and English