ಸುರತ್ಕಲ್ ನಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕಡಿದು ರೌಡಿಯ ಕೊಲೆ

8:45 PM, Tuesday, February 4th, 2014
Share
1 Star2 Stars3 Stars4 Stars5 Stars
(No Ratings Yet)
Loading...

prakash murder

ಮಂಗಳೂರು : ರೌಡಿ ಶೀಟರ್ ಹಾಗೂ ಕೊಲೆ ಪ್ರಕರಣದ ಆರೋಪಿ ಪ್ರಕಾಶ್ (26) ಎಂಬಾತನನ್ನು ನಗರದ ಹೊರವಲಯದ ಸುರತ್ಕಲ್ ಪರಿಸರದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕಡಿದು ಕೊಲೆಗೈದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಪ್ರಕಾಶ್ ಜೋಕಟ್ಟೆಯ ಶಿವರಾಜ್ ಕೊಲೆ ಪ್ರಕರಣದ ಆರೋಪಿ ಯಾಗಿದ್ದು, ಶಿವರಾಜ್ ಕೊಲೆ ಪ್ರಕರಣದಲ್ಲಿ ಆರು ತಿಂಗಳ ಹಿಂದೆ ಜಾಮೀನು ಪಡೆದಿದ್ದ. ಈತ ಪಣಂಬೂರು ಠಾಣೆಯಲ್ಲಿ ನೋಂದಣಿಗೆ ಸಹಿ ಮಾಡಲು ತನ್ನ ತಂದೆಯ ಜತೆ ಉಡುಪಿಯಿಂದ ಪಣಂಬೂರು ಠಾಣೆಗೆ ಆಗಮಿಸಿ ವಾಪಾಸಾಗುವ ಸಂದರ್ಭದಲ್ಲಿ ಸುರತ್ಕಲ್ ನ ಎನ್ಐಟಿಕೆಯ ಬಳಿ ಮಾರುತಿ ಓಮ್ನಿಯಲ್ಲಿ ಬಂದ ತಂಡವೊಂದು ಪ್ರಕಾಶ್ ಪ್ರಯಾಣಿಸುತ್ತಿದ್ದ ಬಸ್ಸನ್ನು ತಡೆದು ಪ್ರಕಾಶ್ ನನ್ನು ಹೊರಗೆಳೆದು ಮಾರಕಾಸ್ತ್ರಗಳಿಂದ ಕಡಿದು ಪರಾರಿಯಾಗಿದೆ ಎನ್ನಲಾಗಿದೆ.

ಪ್ರಕಾಶ್ ಸ್ಥಳದಲ್ಲೇ ಮೃತಪಟ್ಟಿದ್ದ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪ್ರಕಾಶ್ ಮೃತದೇಹವನ್ನು ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಸುರತ್ಕಲ್ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English