- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಅಂಬರೀಷ್ ಆರೋಗ್ಯ ಸ್ಥಿರ

Ambarish [1]ಬೆಂಗಳೂರು: ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಚಿತ್ರನಟ, ವಸತಿ ಸಚಿವ ಅಂಬರೀಷ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಚಿಕಿತ್ಸೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಕ್ರಂ ಆಸ್ಪತ್ರೆಯ ಶ್ವಾಸಕೋಶ ತಜ್ಞ ಡಾ.ಸತೀಶ್ ನಾಯಕ್ ಅವರು, ಸದ್ಯ ಅಂಬರೀಷ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಇನ್ನು ಎರಡು, ಮೂರು ದಿನದಲ್ಲಿ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ಅಂಬರೀಷ್ ಅವರಿಗೆ ಈಗ ವೆಂಟಿಲೇಟರ್ ಅಳವಡಿಸಲಾಗಿದ್ದು, ವೆಂಟಿಲೇಟರ್ ಮೂಲಕವೇ ಅವರಿಗೆ ಇಂದು ದ್ರಹ ರೂಪದ ಆಹಾರ ನೀಡಲಾಗಿದೆ. ಮೂವರು ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಪ್ರತಿ ಗಂಟೆಗೊಮ್ಮೆ ಅವರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದು ಸತೀಶ್ ಅವರು ಹೇಳಿದ್ದಾರೆ.

ಶ್ವಾಸಕೋಶದ ಸಮಸ್ಯೆ ಹಾಗೂ ರಕ್ತದೊತ್ತಡದಲ್ಲಿನ ಏರಿಳಿತದಿಂದಾಗಿ ನಿನ್ನೆ ಅಂಬರೀಷ್ ಅವರು ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಶ್ವಾಸಕೋಶದ ಸೋಂಕಿನ ಕಾರಣ ಉಸಿರಾಟದ ತೊಂದರೆ ಕಾಣಿಸಿಕೊಂಡಿದೆ. ಕಳೆದ ಮೂರು ದಿನಗಳಿಂದ ಅಂಬರೀಷ್ ಅವರು ಜ್ವರದಿಂದಲೂ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆ ದಾಖಲು ಮಾಡಲಾಗಿದೆ.

ನಟಿ, ಸಂಸದೆ ರಮ್ಯಾ, ನಟ ದರ್ಶನ್ ಹಾಗೂ ಆರೋಗ್ಯ ಸಚಿವ ಯು.ಟಿ.ಖಾದರ್ ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಅಂಬಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ.