ಹತ್ತೇ ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ರೆಬಲ್ ಸ್ಟಾರ್

5:14 PM, Tuesday, March 11th, 2014
Share
1 Star2 Stars3 Stars4 Stars5 Stars
(5 rating, 6 votes)
Loading...

Ambarishಬೆಂಗಳೂರುಃ ಶ್ವಾಸಕೋಶದ ಸೋಂಕಿನ ಚಿಕಿತ್ಸೆಗಾಗಿ ಸಿಂಗಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಾಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟ, ವಸತಿ ಸಚಿವ ಅಂಬರೀಶ್ ಅವರ ಆರೋಗ್ಯ ಗಣನೀಯ ಪ್ರಮಾಣದಲ್ಲಿ ಸುಧಾರಿಸಿದೆ. ಇನ್ನು ಹತ್ತೇ ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳುವ ಸಾಧ್ಯತೆಗಳಿವೆ. ಈಗಾಗಲೆ ಅವರಿಗೆ ಹಾಕಲಾಗಿದ್ದ ವೆಂಟಿಲೇಟರನ್ನು ತೆಗೆಯಲಾಗಿದ್ದು ವಿಶೇಷ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ. ಮೌಂಟ್ ಎಲಿಜತ್ ಆಸ್ಪತ್ರೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ಇದುವರೆಗೂ ದ್ರವಾಹಾರ ಸೇವಿಸುತ್ತಿದ್ದ ಅವರು ಈಗ ಲಘು ಉಪಹಾರ ಸೇವಿಸುವಂತಾಗಿದೆ.  ಹತ್ತೇ ದಿನಗಳಲ್ಲಿ ಮನೆಗೆ ಮರಳಲಿದ್ದಾರೆ ರೆಬಲ್ ಸ್ಟಾರ್ ರೆಬೆಲ್ ಸ್ಟಾರ್ ಅಂಬರೀಶ್ ಶ್ವಾಸಕೋಶದ ಸೋಂಕು ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದ್ದು ಕೆಲವು ಉಸಿರಾಟದ ವ್ಯಾಯಾಮಗಳನ್ನು ಮಾಡಿಸಲಾಗುತ್ತಿದೆ. ದಿನೇ ದಿನೇ ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬರುತ್ತಿದ್ದು ಇನ್ನು ಹತ್ತು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ವಿಕ್ರಂ ಆಸ್ಪತ್ರೆ ಅಧಿಕಾರಿ ಅಬ್ದುಲ್ ಹಫೀಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.  ಅವರ ಬರುವಿಕೆಗಾಗಿ ಅಪಾರ ಅಭಿಮಾನಿ ಬಳಗ ಕಾತುರದಿಂದ ನಿರೀಕ್ಷಿಸುತ್ತಿದೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಅವರ ಅಭಿಮಾನಿಗಳು ಹೋಮ ಹವನ ವಿಶೇಷ ಪೂಜೆಗಳನ್ನು ಮಾಡಿ ತಮ್ಮ ನೆಚ್ಚಿನ ನಾಯಕ ಬೇಗ ಗುಣಮುಖರಾಗಲಿ ಎಂದು ಬಯಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English