ದೇರೆಬೈಲಿನ ಕೊಂಚಾಡಿಯ ಚರ್ಚ್ ಬಳಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು

5:33 PM, Wednesday, April 30th, 2014
Share
1 Star2 Stars3 Stars4 Stars5 Stars
(5 rating, 6 votes)
Loading...
construction

ಮಂಗಳೂರು: ದೇರೆಬೈಲಿನ ಕೊಂಚಾಡಿಯ ಚರ್ಚ್ ಬಳಿ ಬ್ಲೂಬೇರಿಸ್ ಕಂಪೆನಿಯ ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿರುವ ದುರ್ಘ‌ಟನೆ ಎಪ್ರಿಲ್‌ 30ರಂದು ಸಂಭವಿಸಿದೆ.

ಕಟ್ಟಡ ನಿರ್ಮಾಣಕ್ಕೆ ಮಣ್ಣು ಅಗೆಯುತ್ತಿದ್ದು ಮೇಲಿನಿಂದ ಮಣ್ಣು ಕುಸಿದು ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಮಣ್ಣಿನಡಿಯಲ್ಲಿ ಸಿಲುಕಿಕೊಂಡಿರುವ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತ ವ್ಯಕ್ತಿಯನ್ನು ಕಟ್ಟಡ ಕಾರ್ಮಿಕ ಬಾಗಲಕೋಟೆಯ ಕಾಶಿಯಪ್ಪ ಎಂದು ಗುರುತಿಸಲಾಗಿದೆ. ಕಾಶಯಪ್ಪ ಅವರ ಪತ್ನಿ ಮಹಾದೇವಿ ಹಾಗೂ ಸ್ವಾಮಿ ನಾಯಕ್‌ ಎನ್ನುವವರು ಗಾಯಗೊಂಡಿದ್ದು ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಅಗ್ನಿ ಶಾಮಕ ದಳದವರು ದೌಡಾಯಿಸಿ ಮಣ್ಣಿನಡಿಯಲ್ಲಿ ಸಿಲುಕಿದವರನ್ನು ರಕ್ಷಿಸಿದರು ಎಂದು ತಿಳಿದು ಬಂದಿದೆ. ಮಳೆಯಿಂದಾಗಿ ಮಣ್ಣು ಶಿಥಿಲಗೊಂಡುದೆ ಘಟನೆಗೆ ಕಾರಣ ಎನ್ನಲಾಗಿದೆ.

2012 ರ ನವಂಬರ್‌ನಲ್ಲಿ ಇದೇ ಸ್ಥಳದಲ್ಲಿ ಗುಡ್ಡ ಕುಸಿದು ಓರ್ವ ದಿನಗೂಲಿ ಕಾರ್ಮಿಕ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಘಟನೆ ಸ್ಥಳಕ್ಕೆ ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಈ ಬಗ್ಗೆ ಕಾವೂರು ಠಾಣೆಯಲ್ಲಿ ಕೇಸು ದಾಖಲಾಗಿದೆ.

construction

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English