ಶ್ರೀ. ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ಆದಿತ್ಯ ಮತ್ತು ದರ್ಶನ್ ಗೆ ತಾಲೂಕು ಮಟ್ಟದ ಪ್ರಜ್ಞಾ ಸಾಧಕ ಪ್ರಶಸ್ತಿ

10:36 PM, Sunday, June 15th, 2014
Share
1 Star2 Stars3 Stars4 Stars5 Stars
(5 rating, 3 votes)
Loading...
Dharshan Aditya

ಧರ್ಮಸ್ಥಳ: : ಪ್ರಸಕ್ತ 2013-14 ವರ್ಷದ ಸುಳ್ಯದ ಪ್ರಜ್ಞಾ ಎಜ್ಯುಕೇಶನ್ ಟ್ರಸ್ಟ್ ನಡೆಸಿದ ಸದಾ ಸಿದ್ದರಾಗಿರೋಣ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಧರ್ಮಸ್ಥಳದ ಶ್ರೀ. ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿ ದರ್ಶನ್ ಭಾಗವಹಿಸಿದ್ದು, ಕಳೆದ ಸಾಲಿನ 6ನೇ ತರಗತಿಯ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಜೂನ್ 15 ಭಾನುವಾರದಂದು ಲಯನ್ಸ್ ಸೇವಾ ಸದನ, ಸುಳ್ಯದಲ್ಲಿ ನಡೆದ ಸನ್ಮಾನ ಸಮಾರಂಭದಲ್ಲಿ 2 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಹಾಗೂ ಪದಕವನ್ನು ಪಡೆದಿದ್ದಾರೆ.

6 ನೇ ತರಗತಿಯ ವಿದ್ಯಾರ್ಥಿ ಆದಿತ್ಯ ಭಾಗವಹಿಸಿದ್ದು, ಕಳೆದ ಸಾಲಿನ 5ನೇ ತರಗತಿಯ ಪರೀಕ್ಷೆಯಲ್ಲಿ ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ಇವರು ಇವರು 2 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಹಾಗೂ ಪದಕವನ್ನು ಪಡೆದಿದ್ದಾರೆ.

ಇವರು ಧರ್ಮಸ್ಥಳದ ಶ್ರೀಯುತ ಮಲ್ಲಿನಾಥ ಜೈನ್ ಹಾಗೂ ಶ್ರೀಮತಿ ಮಂಜುಳಾ ರವರ ಸುಪುತ್ರ. ಇವರ ಪ್ರತಿಭೆಯನ್ನು ಮೆಚ್ಚಿ ಶಾಲಾ ಆಡಳಿತ ಮಂಡಳಿ, ಅಧ್ಯಾಪಕ ವೃಂದ ಮತ್ತು ವಿದ್ಯಾರ್ಥಿ ವೃಂದ ಅಪಾರ ಹರ್ಷ ಹಾಗೂ ಹೃತ್ಪೂರ್ವಕ ಅಭಿನಂದನೆಗಳನ್ನು ವ್ಯಕ್ತಪಡಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English