ಬಿಜೈ ಯಲ್ಲಿ ಮೆಸ್ಕಾಂ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಬರ್ಬರ ಹತ್ಯೆ

7:42 PM, Sunday, September 21st, 2014
Share
1 Star2 Stars3 Stars4 Stars5 Stars
(5 rating, 4 votes)
Loading...
Mescom Engineer murder

ಮಂಗಳೂರು : ಇಬ್ಬರು ದುಷ್ಕರ್ಮಿಗಳು ಮೆಸ್ಕಾಂ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಒಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಸೆಪ್ಟೆಂಬರ್ 21 ರ ಭಾನುವಾರ ಬೆಳಗಿನ ಜಾವ ನಗರದ ಬಿಜೈ ನಲ್ಲಿ ನಡೆದಿದೆ.

ಹತ್ಯೆಗೀಡಾದವರನ್ನು ಮೆಸ್ಕಾಂ ಕಾರ್ಪೋರೇಟ್‌ ಕಜೇರಿಯಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಆಗಿರುವ ಜಗದೀಶ್‌ ರಾವ್‌ (55) ಎನ್ನುವವರಾಗಿದ್ದಾರೆ.

ರಾತ್ರಿ 2.30 ರ ವೇಳೆಗೆ ಗಾಢ ನಿದ್ದೆಯಲ್ಲಿದ್ದ ಜಗದೀಶ್‌ ಅವರ ಪತ್ನಿ ಅರಚಾಟ ಕೇಳಿ ಎಚ್ಚರಗೊಂಡು ನೋಡಿದಾಗ ಜಗದೀಶ್‌ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎನ್ನಲಾಗಿದೆ.

ಕೂಡಲೇ ನೆರಮನೆವರನ್ನು ಕರೆದು ಆಸ್ಪತ್ರಗೆ ಸಾಗಿಸಲು ಪ್ರಯತ್ನಿಸಿದರೂ ಅದಾಗಲೇ ಜಗದೀಶ್‌ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

ಮೊದಲ ಮಹಡಿಯ ಮನೆಯ ಬಾಗಿಲು ಒಡೆದು ಒಳನುಗ್ಗಿದ ದುಷ್ಕರ್ಮಿಗಳು ನಿದ್ರೆಯಲ್ಲಿದ್ದ ಜಗದೀಶ್‌ ಅವರನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.

ಜಗದೀಶ್‌ ಅವರ ಕೊರಳನ್ನು ಚಾಕುವಿನಿಂದ ಇರಿಯಲಾಗಿದ್ದು, ಕೊಲೆಗೆ ಕಾರಣ ಎನೇಂದು ಇದುವರೆಗೆ ತಿಳಿದು ಬಂದಿಲ್ಲ.

ಘಟನಾ ಸ್ಥಲಕ್ಕೆ ಪೊಲೀಸ್‌ ಅಧಿಕಾರಿಗಳು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆ ಗೆ ಕಳುಹಿಸಲಾಗಿದೆ.

ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English