ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕೆ.ಟಿ ಶೈಲಾಜಾ ಭಟ್

11:47 AM, Wednesday, February 9th, 2011
Share
1 Star2 Stars3 Stars4 Stars5 Stars
(No Ratings Yet)
Loading...

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆ ಮಂಗಳೂರು,ಫೆ.08: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ 2011-12ರ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಸದಸ್ಯರಾದ ಕೆ.ಟಿ ಶೈಲಾಜಾ ಭಟ್  ಅವರು ಅಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಧರ್ಮಸ್ಥಳ ಕ್ಷೇತ್ರದ ಬಿಜೆಪಿ ಸದಸ್ಯೆ ಧನಲಕ್ಷ್ಮೀ ಜನಾರ್ಧನ್.ಡಿ ಇವರು ಅಯ್ಕೆಯಾಗಿದ್ದಾರೆ .
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆ ಚುನಾವಣಾಧಿಕಾರಿ   ಎಂ.ವಿ. ಜಯಂತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಹಾಯಕ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ  ಅವರ ಉಪಸ್ಥಿತಿಯಲ್ಲಿ ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ  ಅಧ್ಯಕ್ಷ ಹಾಗೂ ಉಪಾಧ್ಯಕ್ಷ  ಚುನಾವಣೆ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆ ಒಟ್ಟು 35 ಸದಸ್ಯ ಬಲದ ದ.ಕ.ಜಿಲ್ಲಾ ಪಂಚಾಯತ್‌ನಲ್ಲಿ ಬಿಜೆಪಿ 24ಹಾಗೂ ಕಾಂಗ್ರೆಸ್ 11 ಸದಸ್ಯರನ್ನು ಹೊಂದಿದೆ. ಕೆ.ಟಿ ಶೈಲಾಜಾ ಭಟ್  ವಿಟ್ಲ ಕ್ಷೇತ್ರದವರಾದರೆ ಧನಲಕ್ಷ್ಮೀ ಜನಾರ್ಧನ್.ಡಿ  ಧರ್ಮಸ್ಥಳ ಕ್ಷೇತ್ರದದವರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ ಅವರು ನೂತನ ಅಧ್ಯಕ್ಷರಾದ ಶೈಲಾಜಾ ಕೆ.ಟಿ ಹಾಗೂ ಉಪಾಧ್ಯಕ್ಷ ಧನಲಕ್ಷ್ಮೀ ಜನಾರ್ಧನ್.ಡಿ ಇವರಿಗೆ ಶುಭಾಶಯ ಸಲ್ಲಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English