[1]ಮಂಗಳೂರು,ಫೆ.08: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ 2011-12ರ ಅವಧಿಯ ಅಧ್ಯಕ್ಷರಾಗಿ ಬಿಜೆಪಿ ಸದಸ್ಯರಾದ ಕೆ.ಟಿ ಶೈಲಾಜಾ ಭಟ್ ಅವರು ಅಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಧರ್ಮಸ್ಥಳ ಕ್ಷೇತ್ರದ ಬಿಜೆಪಿ ಸದಸ್ಯೆ ಧನಲಕ್ಷ್ಮೀ ಜನಾರ್ಧನ್.ಡಿ ಇವರು ಅಯ್ಕೆಯಾಗಿದ್ದಾರೆ .
[2]ಚುನಾವಣಾಧಿಕಾರಿ ಎಂ.ವಿ. ಜಯಂತಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಸಹಾಯಕ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಅವರ ಉಪಸ್ಥಿತಿಯಲ್ಲಿ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ನಡೆಯಿತು.
[3]ಒಟ್ಟು 35 ಸದಸ್ಯ ಬಲದ ದ.ಕ.ಜಿಲ್ಲಾ ಪಂಚಾಯತ್ನಲ್ಲಿ ಬಿಜೆಪಿ 24ಹಾಗೂ ಕಾಂಗ್ರೆಸ್ 11 ಸದಸ್ಯರನ್ನು ಹೊಂದಿದೆ. ಕೆ.ಟಿ ಶೈಲಾಜಾ ಭಟ್ ವಿಟ್ಲ ಕ್ಷೇತ್ರದವರಾದರೆ ಧನಲಕ್ಷ್ಮೀ ಜನಾರ್ಧನ್.ಡಿ ಧರ್ಮಸ್ಥಳ ಕ್ಷೇತ್ರದದವರಾಗಿದ್ದಾರೆ.
[4]ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಪದ್ಮನಾಭ ಕೊಟ್ಟಾರಿ ಅವರು ನೂತನ ಅಧ್ಯಕ್ಷರಾದ ಶೈಲಾಜಾ ಕೆ.ಟಿ ಹಾಗೂ ಉಪಾಧ್ಯಕ್ಷ ಧನಲಕ್ಷ್ಮೀ ಜನಾರ್ಧನ್.ಡಿ ಇವರಿಗೆ ಶುಭಾಶಯ ಸಲ್ಲಿಸಿದರು.