ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು

11:58 PM, Monday, November 3rd, 2014
Share
1 Star2 Stars3 Stars4 Stars5 Stars
(5 rating, 6 votes)
Loading...

KSRTC bus
ಮಂಗಳೂರು : ಕೆಲವು ಅಪರಿಚಿತ ದುಷ್ಕರ್ಮಿಗಳು ಟೈರ್‌ಗೆ ಬೆಂಕಿ ಹಚ್ಚಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಸೋಮವಾರ ಮುಂಜಾನೆ ಅಡ್ಯಾರ್‌ ಕಟ್ಟೆಯಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಕೆಲವು ಸಂಘಟನೆಗಳು ಬಂದ್‌ಗೆ ಕರೆ ನೀಡಿವೆ ಎಂಬ ವದಂತಿ ಹರಡಿದ ಹಿನ್ನೆಲೆಯಲ್ಲಿ ಮುಂಜಾನೆ ಅಡ್ಯಾರ್‌ ಕಟ್ಟೆಯಲ್ಲಿ ಮೊದಲು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಟೈರ್‌ಗೆ ಬೆಂಕಿ ಹಚ್ಚಲಾಯಿತು ಅಲ್ಲದೇ ದುಷ್ಕರ್ಮಿಗಳು ಆದೇ ಮಾರ್ಗದಲ್ಲಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ಕಲ್ಲು ತೂರಾಟ ನಡೆಸಿ ಗಾಜುಗಳನ್ನು ಪುಡಿಗೈದರು.

ಘಟನಾಸ್ಥಳಕ್ಕೆ ಅಗಮಿಸಿದ ಕಂಕನಾಡಿ ಪೊಲೀಸರು ಬೆಂಕಿಯನ್ನು ನಂದಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕಂಕನಾಡಿ ಪೊಲೀಸರು ದೂರು ದಾಖಲಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English