ಹರಿಷಿ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಮಾಜಿ ಸಚಿವ ಹಾಲಪ್ಪ ಹಲ್ಲೆ

9:20 PM, Wednesday, February 16th, 2011
Share
1 Star2 Stars3 Stars4 Stars5 Stars
(No Ratings Yet)
Loading...

ಹಾಲಪ್ಪ ಉಮಾಪತಿ ಶಿವಮೊಗ್ಗ : ಸೊರಬದ ಹರಿಷಿ ಗ್ರಾಮದ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಹರಿಷಿ ಗ್ರಾಮ ಪಂಚಾಯತ್ ಅಧ್ಯಕ್ಷ ಉಮಾಪತಿಯವರ ಮೇಲೆ ಹಾಲಪ್ಪ ಬೂಟು ಕಾಲಿನಿಂದ ಹಲ್ಲೆ ನಡೆಸಿದ್ದಾರೆ. ಬೂಟು ಕಾಲಿನಿಂದ ಎದೆಗೆ ಒದ್ದು ಹಲ್ಲೆ ನಡೆಸಿರುವ ಘಟನೆಯಿಂದ ಉಮಾಪತಿ ಸೊರಬ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಉದ್ಘಾಟನಾ ಸಮಾರಂಭಕ್ಕೆ ಬಂದಿದ್ದ ಹಾಲಪ್ಪ ಆರೋಗ್ಯ ಕೇಂದ್ರದ ಕೋಣೆಗಳಿಗೆ ಬೀಗ ಹಾಕಿರುವುದನ್ನು ಪ್ರಶ್ನಿಸಿದ್ದರು. ಆರೋಗ್ಯದ ಕೇಂದ್ರದ ಕೆಲಸ ಪೂರ್ಣವಾಗಿಲ್ಲ ಎಂದು ಅಧ್ಯಕ್ಷ ಉಮಾಪತಿ ಬೀಗ ಹಾಕಿದ್ದರು. ಇದರಿಂದ ಆಕ್ರೋಶಗೊಂಡ ಮಾಜಿ ಸಚಿವರು ಅಧ್ಯಕ್ಷರ ಎದೆಗೆ ಒದ್ದು ಹಲ್ಲೆ ನಡೆಸಿದ್ದಾರೆಂದು ದೂರಲಾಗಿದೆ. ಹಲ್ಲೆಗೊಳಗಾದ ಉಮಾಪತಿ ಸೊರಬ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವುದಾಗಿಯೂ ಹೇಳಿದ್ದಾರೆ.
ಹಾಲಪ್ಪ ಅವರು ಜಟಾಪಟಿಯ ನಡುವೆಯೇ ಪೊಲೀಸರ ನೆರವಿನೊಂದಿಗೆ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English