ಪಣಂಬೂರು ಮೀನಕಳೀಯದಲ್ಲಿ ವಿವಾಹಿತೆ ಮಹಿಳೆಯ ಕೊಲೆ

8:35 PM, Tuesday, January 13th, 2015
Share
1 Star2 Stars3 Stars4 Stars5 Stars
(4 rating, 6 votes)
Loading...
meenakaliya murder

ಮಂಗಳೂರು : ವಿವಾಹಿತೆ ಮಹಿಳೆಯೊಬ್ಬರನ್ನು ಬಚ್ಚಲು ಮನೆಯಲ್ಲಿ ಬರ್ಬರವಾಗಿ ಹತ್ಯೆಮಾಡಲಾಗಿದ್ದು ಮೃತಳನ್ನು ಉತ್ತರ ಪ್ರದೇಶ ಮೂಲದ ಕೂಲಿ ಕಾರ್ಮಿಕೆ ಕಲ್ಪನ(25) ಎಂದು ಗುರುತಿಸಲಾಗಿದೆ.

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೀನಕಳೀಯ ಎಂಬಲ್ಲಿ ಈ ಘಟನೆ ನಡೆದಿದೆ. ಸೋಮವಾರ ರಾತ್ರಿ ಪಾಳಿಯಲ್ಲಿ ಗಂಡ ಕೆಲಸಕ್ಕೆ ಹೋಗಿದ್ದು ಮಂಗಳವಾರ ಬೆಳಗ್ಗೆ ಮನೆಗೆ ವಾಪಾಸು ಬಂದಾಗ ಕೊಲೆ ಕೃತ್ಯ ಬಯಲಾಗಿದೆ. ಆಕೆಯ ತಲೆಗೆ ಕಲ್ಲನ್ನು ಎತ್ತಿ ಹಾಕಿ ಈ ಕೃತ್ಯ ನಡೆಸಲಾಗಿದೆ.

ರಾಜೇಶ್ ಮತ್ತು ಕಲ್ಪನ ಉತ್ತರ ಪ್ರದೆಶ ಮೂಲದಾವರಾಗಿದ್ದು, ಕೆಲ ತಿಂಗಳ ಹಿಂದಷ್ಟೇ ಇವರು ವಿವಾಹವಾಗಿದ್ದರು. ಮಂಗಳೂರಿಗೆ ನಾಲ್ಕು ತಿಂಗಳ ಹಿಂದೆ ಕೆಲಸಕ್ಕೆ ಬಂದು ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಲ್ಪನ ಹಗಲಿನಲ್ಲಿ ಕೆಲಸಕ್ಕೆ ಹೋಗುತ್ತಿದ್ದರೆ, ರಾಜೇಶ ರಾತ್ರಿ ಪಾಳಿಯಲ್ಲಿ ದುಡಿಯುತ್ತಿದ್ದ.

ಶವವನ್ನು ಪೋಸ್ಟ್ ಮಾಟಂ ಗೆ ಕಳುಹಿಸಲಾಗಿದ್ದು, ರಾಜೇಶನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English