ಮಂಜೇಶ್ವರ : ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 6 ಸೋಮವಾರ ಸೂರ್ಯಾಸ್ತದವರೆಗೆ ನಡೆಯುವ 12 ನೇ ಅಖಂಡ ಭಜನಾ ಸಪ್ತಾಹಕ್ಕೆ ಮಾಣಿಲ ಶ್ರೀ ಧಾಮದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಸೂರ್ಯಾಸ್ತಕ್ಕೆ ಸರಿಯಾಗಿ ದೀಪ ಬೆಳಗಿಸಿ ಚಾಲನೆ ನೀಡಿದರು.
ಅಲ್ಲದೇ ಪರಮ ಪೂಜ್ಯ ಮಾಣಿಲ ಶ್ರೀಗಳು ಭಜನೆ ಹಾಡುವುದರೊಂದಿಗೆ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಜಿಲ್ಲೆಯ, ಪರಜಿಲ್ಲೆಯ ಭಕ್ತಾದಿಗಳ ಭಜನಾ ತಂಡಗಳು ಈ ಅಖಂಡ ಭಜನಾ ಸಪ್ತಾಹದಲ್ಲಿ ಪಾಲ್ಗೊಳ್ಳಲಿವೆ ಎಂದು ಯೋಗಾಶ್ರಮದ ಪ್ರಕಟಣೆಯಲ್ಲಿ ತಿಳಿಸಿವೆ.
Click this button or press Ctrl+G to toggle between Kannada and English