ಮಂಗಳೂರು : ಕೊಡಗು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಯಾಗಿ ಭಡ್ತಿ ಹೊಂದಿದ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಶ್ರೀ ಹೆಚ್. ವಿಶ್ವನಾಥ ಪೂಜಾರಿ ಇವರಿಗೆ ತಾಲೂಕು ಪಂಚಾಯತ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಂದ ಜಂಟಿಯಾಗಿ ಮಂಗಳೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ಮಂಗಳವಾರ ನೇರವೇರಿತು.
ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಜನಿಯವರು ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಯೂಸುಫ್ ಇವರು ತಾಲೂಕು ಪಂಚಾಯತ್ನ ಎಲ್ಲಾ ಸದಸ್ಯರ ಹಾಗೂ ಸಿಬ್ಬಂದಿ ವರ್ಗದವರ ಪರವಾಗಿ ನೆನಪಿನ ಕಾಣಿಕೆಯನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಿದರು.
ತಾಲೂಕು ಪಂಚಾಯತ್ನ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ, ಶ್ರೀ ವೈ. ಶಿವರಾಮಯ್ಯ ಇವರು ಕಾರ್ಯಕ್ರಮ ನಿರ್ವಹಿಸಿ ಅಭಿನಂದಿಸಿದರು. ಗೌರವಾನ್ವಿತ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀ ಜೋನ್ಸನ್ ಲೋಬೊ, ಶ್ರೀ ಮಹಮ್ಮದ್ ಮಲಾರ್, ಶ್ರೀ ಮಹಮ್ಮದ್ ಕುಂಞ, ಶ್ರೀಮತಿ ವಜ್ರಾಕ್ಷಿ ಶೆಟ್ಟಿ, ಶ್ರೀ ಪ್ರಕಾಶ್ ಪಿ. ಹಾಗೂ ತಾಲೂಕು ಪಂಚಾಯತ್ ಸಿಬ್ಬಂದಿಯವರಾದ ಶ್ರೀ ಕೇಶವ ದೇವಾಡಿಗ ಇವರುಗಳು ತಮ್ಮ ಅನಿಸಿಕೆಗಳೊಂದಿಗೆ ಶುಭ ಹಾರೈಸಿದರು.