ಹೋಟೇಲ್ ಮ್ಯಾನೇಜರ್ ಟಿಪ್ಪರ್ ಅಪಘಾತದಲ್ಲಿ ಮೃತ್ಯು

12:00 AM, Friday, June 5th, 2015
Share
1 Star2 Stars3 Stars4 Stars5 Stars
(5 rating, 6 votes)
Loading...

Aithal

ಕುಂದಾಪುರ: ಇಲ್ಲಿನ ಹರ್ಷ ರಿಫ್ರೆಶ್‌ಮೆಂಟ್ ಹೋಟೇಲಿನ ಮ್ಯಾನೇಜರ್ ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನದ ಸುಮಾರಿಗೆ ಕುಂದಾಪುರ ನಗರದ ಶಾಸ್ತ್ರೀ ವೃತ್ತದ ಸಮೀಪ ನಡೆದಿದೆ.

ಮೃತ ಪಟ್ಟವರನ್ನು ಕುಂದಾಪುರದ ಯುನಿಟ್ ಹಾಲ್ ಸಮೀಪದ ನಿವಾಸಿ ನರಸಿಂಹ ಐತಾಳ್ (48) ಎಂದು ಗುರುತಿಸಲಾಗಿದೆ.

ಮೂಲತಃ ಬಂಟ್ವಾಳದ ದಾಸಬೈಲಿನವರಾದ ನರಸಿಂಹ ಐತಾಳ್ ಅವರು ಕಳೆದ ಇಪ್ಪತ್ತೈದು ವರ್ಷಗಳಿಂದಲೂ ಕುಂದಾಪುರದಲ್ಲಿ ವಾಸಿಸುತಿದ್ದರು, ಅಲ್ಲದೇ ಕುಂದಾಪುರದ ಹರ್ಷ ರಿಫ್ರೆಶ್‌ಮೆಂಟ್ ಹೋಟೇಲಿನಲ್ಲಿ ಮ್ಯಾನೇಜರ್ ವೃತ್ತಿಯನ್ನು ಮಾಡಿಕೊಂಡಿದ್ದರು. ಗುರುವಾರ ಮಧ್ಯಾಹ್ನ ಕೆಲಸ ಮುಗಿಸಿ ಮನೆಗೆ ಹಾಲಿನ ಫ್ಯಾಕೇಟ್ ಕೊಡಲೆಂದು ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಬಳಿಕ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಟಿಪ್ಪರ್ ವಶಪಡಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮೃತ ನರಸಿಂಹ ಐತಾಳ್ ಅವರು ಪತ್ನಿ ಸುಮತಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English