ನೂತನ ಗ್ರಾ.ಪಂ. ಸದಸ್ಯರಿಗೆ ಜಿ.ಪಂ. ಅಧ್ಯಕ್ಷರ ಅಭಿನಂದನೆ

11:35 PM, Friday, July 10th, 2015
Share
1 Star2 Stars3 Stars4 Stars5 Stars
(5 rating, 7 votes)
Loading...
Asha Timmappa

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ/ಉಪಾಧ್ಯಕ್ಷ/ ಸದಸ್ಯರುಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ ಶುಭ ಹಾರೈಸಿದ್ದಾರೆ.

ನೂತನ ಆಡಳಿತಾವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ, ಸ್ವಚ್ಛತೆ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಟ್ಟು ಯಾವುದೇ ಸಮಸ್ಯೆ ಬಾರದಂತೆ ಆಡಳಿತ ನಡೆಸುವಂತಾಗಬೇಕು. ಈ ರೀತಿ ಮಾಡಿದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕನಸಿನ ಭಾರತ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಸದಸ್ಯರು ಸಮಾರೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕಾದುದು ತೀರಾ ಅಗತ್ಯವಾಗಿದೆ. ತಮ್ಮ ವ್ಯಾಪ್ತಿಯ ಪ್ರತಿಯೊಂದು ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ರೂಪಿಸುವಲ್ಲಿ ತಾವು ದಿಟ್ಟ ಹೆಜ್ಜೆಯನ್ನಿಟ್ಟು ಶ್ರಮಿಸಬೇಕೆಂಬ ನಂಬಿಕೆ ತನಗಿದೆ ಎಂದು ಅವರು ತಮ್ಮ ಶುಭ ಹಾರೈಕೆಯಲ್ಲಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English