ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ, ಕದ್ರಿ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್ ಅಮಾನತು

11:35 PM, Friday, July 31st, 2015
Share
1 Star2 Stars3 Stars4 Stars5 Stars
(5 rating, 5 votes)
Loading...

Advacate protest

ಮಂಗಳೂರು: ಪೊಲೀಸ್ ಆಯುಕ್ತ ಎಸ್.ಮುರುಗನ್ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಕದ್ರಿ ಇನ್ಸ್ ಪೆಕ್ಟರ್ ಟಿ.ಡಿ ನಾಗರಾಜ್ ಅವರನ್ನು ಇಂದು ಅಮಾನತು ಮಾಡಿರುವುದಾಗಿ ತಿಳಿದು ಬಂದಿದೆ.

ಶುಕ್ರವಾರ ನ್ಯಾಯವಾದಿ ಉತ್ತಮ್ ರೈ ತಮ್ಮ ಕಕ್ಷಿದಾರನ ಜೊತೆಗೆ ಕೇಸ್ ಸಂಬಂಧಿಸಿ ಠಾಣೆಗೆ ಹೋದಾಗ ನಾಗರಾಜ್ ಅವರು ರೈ ಅವರೊಂದಿಗೆ ಅನೂಚಿತವಾಗಿ ನಡೆದುಕೊಂಡದ್ದಲ್ಲದೇ ಹಲ್ಲೆ ಮಾಡಿದ್ದಾಗಿ ದೂರಿದ್ದಾರೆ. ಅದಕ್ಕಾಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಪಿ.ಚೆಂಗಪ್ಪ ನೇತೃತ್ವದಲ್ಲಿ ಕದ್ರಿ ಠಾಣೆ ಮುಂದೆ ನ್ಯಾಯವಾದಿಗಳು ಧರಣಿ ನಡೆಸಿ ಇನ್ಸ್ ಪೆಕ್ಟರ್ ಅಮಾನತಿಗೆ ಪಟ್ಟು ಹಿಡಿದಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಇನ್ಸ್ ಪೆಕ್ಟರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆನ್ನಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English