ಮಂಗಳೂರು : ಎತ್ತಿನ ಹೊಳೆ ಯೋಜನೆ ಜಾರಿ ಮಾಡುವುದನ್ನು ವಿರೋಧಿಸಿ ಹಿರಿಯ ಕಾಂಗ್ರೆಸ್ ನಾಯಕ , ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರಿಂದು ಶುಕ್ರವಾರ ಕುದ್ರೋಳಿ ಶ್ರೀ ಗೋಕರ್ಣ ನಾಥೇಶ್ವರನಸನ್ನಿಧಿಯಲ್ಲಿ ಉರುಳು ಸೇವೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು.
ದೇವಸ್ತಾನದಲ್ಲಿ ನವರಾತ್ರಿ ಆಚರಣೆ ನಡೆಯುತ್ತಿದ್ದು,ಲೋಕಕಲ್ಯಾಣಾರ್ಥವಾಗಿ ಮತ್ತು ಎತ್ತಿನಹೊಳೆ ಯೋಜನೆ ಕೈಬಿಡಲು ಪೂಜಾರಿ ಅವರ ನೇತ್ರತ್ವದಲ್ಲಿ ಬ್ರಹ್ಮ ಕಲಶೋತ್ಸವವನ್ನೂ ನಡೆಸಲಾಗುತ್ತಿದೆ.
ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗೋಕರ್ಣನಾಥ ಕ್ಷೇತ್ರದಲ್ಲಿ ಶುಕ್ರವಾರ ದೇವಸ್ಥಾನದಲ್ಲಿ ಬ್ರಹ್ಮಕಲಶ ಜರಗಿತು. ಮಧ್ಯಾಹ್ನದ ವೇಳೆಗೆ ಮಹಾಪೂಜೆ ಜರಗಿತು. ಶಾರದೆ ಹಾಗೂ ನವದುರ್ಗೆಯರನ್ನು ಪ್ರತಿಷ್ಠಾಪಿಸಲಾಗಿದ್ದು ಭಾರೀ ಭಕ್ತರು, ವಿದೇಶಿಗರು ಕುದ್ರೋಳಿ ಕ್ಷೇತ್ರಕ್ಕೆ ಬರುತ್ತಿದ್ದಾರೆ.
Click this button or press Ctrl+G to toggle between Kannada and English