ಕಾರ್ಯಕರ್ತರಿಗೆ ಅಭಿನಂದನೆ – ಕೋಟ ಶ್ರೀನಿವಾಸ ಪೂಜಾರಿ

7:11 PM, Wednesday, December 30th, 2015
Share
1 Star2 Stars3 Stars4 Stars5 Stars
(5 rating, 6 votes)
Loading...
kota

ಮಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆಯ ಫಲಿತಾಂಶದಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜಗನ್ನಾಥರಾವ್ ಜೋಷಿ ಸೌಧದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಭೆ ಜರುಗಿತು. ಈ ಸಭೆಯಲ್ಲಿ ಎಲ್ಲಾ ಕಾರ್ಯಕರ್ತರು ಮತ್ತು ಮತದಾರರಿಗೆ ಕೋಟ ಶ್ರೀನಿವಾಸ ಪೂಜಾರಿಯವರು ಅಭಿನಂದನೆ ಸಲ್ಲಿಸಿದರು.

ಜಿಲ್ಲಾಧ್ಯಕ್ಷರಾದ ಕೆ.ಪ್ರತಾಪ್‌ಸಿಂಹ ನಾಯಕ್, ಜಿಲ್ಲಾ ಪ್ರಭಾರಿ ಲಾಲಾಜಿ ಮೆಂಡನ್, ವಿಧಾನ ಪರಿಷತ್ ಸದಸ್ಯ ಕ್ಯಾ|ಗಣೇಶ್ ಕಾರ್ಣಿಕ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಮಾಜಿ ವಿ.ಪ.ಸದಸ್ಯ ಕೆ.ಮೋನಪ್ಪ ಭಂಡಾರಿ, ರಾಜ್ಯ ಕಾರ್ಯದರ್ಶಿ ಶ್ಯಾಮಲಾ ಕುಂದರ್, ಮಾಜಿ ಶಾಸಕ ಎನ್.ಯೋಗೀಶ್ ಭಟ್, ಜಿಲ್ಲಾ ಉಪಾಧ್ಯಕ್ಷ ಉಮಾನಾಥ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English