ಬಂಟ್ವಾಳ : ಬಿ.ಜೆ.ಪಿ ಯ ಹಿರಿಯ ನಾಯಕ ಕಾಡಬೆಟ್ಟು ನಾರಾಯಣ ರೈ ಯವರ ಸುಪುತ್ರರಾಗಿರುವ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಇವರು ಬಿ.ಜೆ.ಪಿ ಯ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 16 ನೇ ಕೊಳ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ರಾಷ್ಟ್ರೀಯ ಚಿಂತನೆಯ ಸಂಘಟನೆಯ ಕಾರ್ಯಕರ್ತನಾಗಿ ತನ್ನ ಸಾಮಾಜಿಕ ಜೀವನವನ್ನು ಪ್ರಾರಂಭಿಸಿದರು ಪ್ರಗತಿಪರ ಕೃಷಿಕರಾಗಿ ವಗ್ಗ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾವಳಪಡೂರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ 12 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. 2 ಅವಧಿಗೆ ಕಾವಳಪಡೂರು ಗ್ರಾಂ.ಪಂ ಸದಸ್ಯರಾಗಿ ಪ್ರಸ್ತುತ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಂಗಳೂರಿನ SKADS ಗೆ ಹಾಲಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಧಾರ್ಮಿಕವಾಗಿ ಶ್ರೀ ಶಾರದಾಂಭ ಭಜನಾ ಮಂದಿರ ಕಾಡಬೆಟ್ಟು ಇದರ ಗೌರವಾಧ್ಯಕ್ಷರಾಗಿ ಪರಿಸರದಲ್ಲಿ ಧಾರ್ಮಿಕ ಸಾಮಾಜಿಕ ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರು ಕಾನೂನು ಪದವೀಧರರು ಸರಪಾಡಿ ಜಿಲ್ಲಾ ಪಂಚಾಯತ್ ಮೂಲಭೂತ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿರುವ ಇವರು ಎಲ್ಲಾ ವರ್ಗದ ಜನರೊಂದಿಗೆ ಬೆರೆತು ಅವರ ಕಷ್ಟ ಸುಖಗಳಿಗೆ ಸ್ಪಂದಿಸಿ ಜನಾನುರಾಗಿಗಳಾಗಿದ್ದಾರೆ. ಬಿ.ಜೆ.ಪಿ ಯ ಹಿರಿಯ ನಾಯಕ ಕಾಡಬೆಟ್ಟು ನಾರಾಯಣ ರೈ ಯವರ ಸುಪುತ್ರರಾಗಿರುವ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಇವರು ಬಿ.ಜೆ.ಪಿ ಯ ಅಭ್ಯರ್ಥಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ 16 ನೇ ಕೊಳ್ನಾಡು ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
Click this button or press Ctrl+G to toggle between Kannada and English