ಮತದಾರರ ಕೈಯಲ್ಲಿ ದೇಶದ ಭವಿಷ್ಯ

9:01 PM, Monday, April 11th, 2016
Share
1 Star2 Stars3 Stars4 Stars5 Stars
(5 rating, 6 votes)
Loading...
Kerala Vote

ಕಾಸರಗೋಡು : ನಾಡಿನ ಭವಿಷ್ಯ ತಮ್ಮ ಕೈಯ್ಯಲಿದೆ ಎಂಬುದನ್ನು ಮತದಾರರು ತಿಳಿದಿರಬೇಕು ಎಂದು ಖ್ಯಾತ ಸಾಹಿತಿ ಡಾ.ಅಂಬಿಕಾಸುತನ್ ಮಾಂಙಾಡ್ ಹೇಳಿದ್ದಾರೆ.

ಕೇರಳ ವಿಧಾನಸಭಾ ಚುನಾವಣೆಯ ಅಂಗವಾಗಿ ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾದ ಮತದಾರರಿಗಿರುವ ತಿಳುವಳಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಪ್ರತಿಯೊಬ್ಬರ ಕೈಯಲ್ಲೂ ಅಧಿಕಾರವಿದ್ದು , ಅದರ ಸ್ಪಷ್ಟ ಅರಿವು ನಮಗಿರಬೇಕೆಂದು ಅವರು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಪಾಲ್ಗೊಂಡಿದ್ದ ಪ್ರತಿಯೊಬ್ಬರೂ ‘ತಾನು ಮತ ಚಲಾಯಿಸಿ ತನ್ನ ಕರ್ತವ್ಯವನ್ನು ಪಾಲಿಸುತ್ತೇನೆ’ ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English