ದ.ಕ. ಜಿಲ್ಲಾಧಿಕಾರಿ ಸುಬೋಧ್ ಯಾದವ್‌ ಮತ್ತು ಉಡುಪಿ ಜಿಲ್ಲಾಧಿಕಾರಿ ಪಿ.ಹೇಮಲತಾ ವರ್ಗಾವಣೆ

9:18 PM, Saturday, May 14th, 2011
Share
1 Star2 Stars3 Stars4 Stars5 Stars
(No Ratings Yet)
Loading...

ದ.ಕ. ಜಿಲ್ಲಾಧಿಕಾರಿ ಸುಬೋಧ್ ಯಾದವ್‌ ಉಡುಪಿ ಜಿಲ್ಲಾಧಿಕಾರಿ ಪಿ.ಹೇಮಲತಾಮಂಗಳೂರು : ದ.ಕ. ಜಿಲ್ಲಾಧಿಕಾರಿ ಸುಬೋಧ್ ಯಾದವ್‌  ಮತ್ತು ಉಡುಪಿ ಜಿಲ್ಲಾಧಿಕಾರಿ ಪಿ.ಹೇಮಲತಾರನ್ನು ಬೆಂಗಳೂರಿಗೆ ಹಾಗೂ ಪ್ರಸ್ತುತ ಚಿಕ್ಕಮಗಳೂರಿನ ಚೆನ್ನಪ್ಪ ಗೌಡರನ್ನು ಮಂಗಳೂರಿನ ಜಿಲ್ಲಾಧಿಕಾರಿಯಾಗಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಡಾ| ಎಂ.ಟಿ. ರೇಜು ಅವರನ್ನು ಉಡುಪಿ ಜಿಲ್ಲಧಿಕಾರಿಗಳನ್ನಾಗಿ ನೇಮಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.
ದ.ಕ. ಜಿಲ್ಲಾಧಿಕಾರಿಯಾಗಿ 2010, ಅ.23 ರಂದು ಸುಬೋಧ್ ಯಾದವ್ ಅಧಿಕಾರ ಸ್ವೀಕರಿಸಿದ್ದರು.  ಕೇವಲ ಏಳು ತಿಂಗಳು ಕರ್ತವ್ಯ ನಿರ್ವಹಿಸಿ ಇದೀಗ ವರ್ಗಾವಣೆಗೊಂಡಿದ್ದಾರೆ. ಸರಕಾರಿ ಭೂಮಿ ಒತ್ತುವರಿ ಮಾಡುವವರ ವಿರುದ್ಧ ಕ್ರಮ, ಅಕ್ರಮವಾಗಿ ಮರಳು ಸಾಗಾಟವನ್ನು ನಿಷೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಕಳೆದ ಸೋಮವಾರದಿಂದ ರಜೆಯಲ್ಲಿರುವ ಸುಬೋಧ್ ಯಾದವ್  ಲಕ್ನೋದಲ್ಲಿ ಸಂಬಂಧಿಕರ ಮದುವೆ ಕಾರ್ಯನಿಮಿತ್ತ ತೆರಳಿದ್ದರು.
ಉಡುಪಿ ಜಿಲ್ಲಾಧಿಕಾರಿಯಾಗಿ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸಿದ ಪಿ.ಹೇಮಲತಾರನ್ನು ಬೆಂಗಳೂರಿನ ತೋಟ ಗಾರಿಕಾ ಇಲಾಖೆಯ ನಿರ್ದೇಶಕರಾಗಿ ನೇಮಿಸಲಾಗಿದೆ.
ಮೇ 15ರಂದು ಬೆಳಗ್ಗೆ 10:30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಿರ್ಗಮನ ಜಿಲ್ಲಾಧಿಕಾರಿ ಹೇಮಲತಾರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English