ಕರ್ನಾಟಕ ಪಾಲಿಟೆಕ್ನಿಕ್‌ ಕಾಲೇಜಿನ ಉಪನ್ಯಾಸಕ ರಸ್ತೆ ಅಫಘಾತದಲ್ಲಿ ಸಾವು

12:38 PM, Friday, April 22nd, 2016
Share
1 Star2 Stars3 Stars4 Stars5 Stars
(5 rating, 6 votes)
Loading...
Sushanth thoudugoli

ಉಳ್ಳಾಲ: ಬೈಕಂಪಾಡಿ ಬಳಿ ಟ್ಯಾಂಕರ್‌ -ಬೈಕ್‌ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರಿನ ಕರ್ನಾಟಕ ಪಾಲಿಟೆಕ್ನಿಕ್‌ ಕಾಲೇಜಿನ ಉಪನ್ಯಾಸಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸೋಮೇಶ್ವರ ಸಾರಸ್ವತ ಕಾಲನಿ ನಿವಾಸಿ ಸುಶಾಂತ್‌ ಕುಮಾರ್‌ (28) ಮೃತಪಟ್ಟವರು.

ಜೋಕಟ್ಟೆಯಲ್ಲಿರುವ ಸ್ನೇಹಿತನ ಮೆಹೆಂದಿ ಸಮಾರಂಭ ಮುಗಿಸಿ ಹೆದ್ದಾರಿ ತಲುಪುತ್ತಿದ್ದಂತೆ ಮಂಗಳೂರು ಕಡೆ ತೆರಳಲು ಸ್ಥಳೀಯರಲ್ಲಿ ವಿಚಾರಿಸಿ ಹೆದ್ದಾರಿಗೆ ಬರುತ್ತಿದ್ದಂತೆ ಅತೀ ವೇಗದಲ್ಲಿ ಬಂದ ಟ್ಯಾಂಕರ್‌ ಲಾರಿ ಇವರಿದ್ದ ಬೈಕಿಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮೂಲತ: ತೌಡುಗೋಳಿ ನಿವಾಸಿಯಾಗಿದ್ದ ಸುಶಾಂತ್‌ ಕೆಪಿಟಿಯಲ್ಲಿ ಡಿಪ್ಲೋಮಾ ಮುಗಿಸಿ ಮೈಸೂರು ಜೆಎಸ್‌ಎಸ್‌ ನಲ್ಲಿ ಇಂಜಿನಿಯರಿಂಗ್‌ನಲ್ಲಿ ಪದವಿ ಮುಗಿಸಿದ ಪಡುಬಿದ್ರಿಯ ಸುಜ್ಲಾನ್‌, ಬೈಕಂಪಾಡಿಯ ಎಂಆರ್‌ಪಿಎಲ್‌ನಲ್ಲಿ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಕೆಪಿಟಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು.

ಉತ್ತಮ ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕವಾಗಿ ತನ್ನನ್ನು ತೊಡಗಿಸಿಕೊಂಡಿದ್ದರು. ಅವಿವಾಹಿತರಾಗಿದ್ದ ಅವರು ತಂದೆ, ತಾಯಿ, ಮೂವರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English