ಮಂಗಳೂರಿನ ಪುರಭವನಕ್ಕೆ ‘ಕುದ್ಮುಲ್ ರಂಗರಾವ್ ಸ್ಮಾರಕ’ ಹೆಸರಿಡಲು ಒಪ್ಪಿಗೆ ಸೂಚನೆ

12:51 PM, Saturday, July 30th, 2016
Share
1 Star2 Stars3 Stars4 Stars5 Stars
(No Ratings Yet)
Loading...

MCCಮಂಗಳೂರು: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯು ಮೇಯರ್ ಹರಿನಾಥ್ ಅಧ್ಯಕ್ಷತೆಯಲ್ಲಿ ಮಂಗಳಾ ಸಭಾಂಗಣದಲ್ಲಿ ನಡೆಯಿತು.

ಮಂಗಳೂರಿನ ಹೃದಯ ಭಾಗದಲ್ಲಿರುವ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರ ತಾಣ ಪುರಭವನಕ್ಕೆ ದಲಿತೋದ್ಧಾರಕ ‘ಕುದ್ಮುಲ್ ರಂಗರಾವ್ ಸ್ಮಾರಕ’ ಎಂದು ಹೆಸರಿಡಲು ಸಭೆಯಲ್ಲಿ ನಿರ್ಣಯಿಸಲಾಯಿತು. ಮುಖ್ಯ ಸಚೇತಕ ಶಶಿಧರ ಹೆಗ್ಡೆ ಕಾರ್ಯಸೂಚಿ ಮಂಡಿಸಿದ್ದು, ಒಪ್ಪಿಗೆ ಸೂಚಿಸಲಾಯಿತು.

MCCಪುರಭವನದ ಎದುರಿನ ಮೈದಾನ ರಸ್ತೆಯಲ್ಲಿ ಪಾದಾಚಾರಿ ಮೇಲ್ಸೇತುವೆ (ಸ್ಕೈವಾಕ್) ನಿರ್ಮಾಣಕ್ಕೆ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಮುಂದಾಗಿರುವ ಕುರಿತು ಸಭೆಯ ಕಾರ್ಯಸೂಚಿಯಲ್ಲಿ ವಿಷಯ ಪ್ರಸ್ತಾಪವಾಗಿ ನಗರ ಯೋಜನಾ ಸ್ಥಾಯಿ ಸಮಿತಿಯಲ್ಲಿ ಚರ್ಚೆಗೆ ನಿರ್ಣಯಿಸಲಾಯಿತು.

ಸ್ಕೈವಾಕ್ ನಿರ್ಮಾಣಕ್ಕೆ ತಗಲುವ ಒಟ್ಟು ವೆಚ್ಚದಲ್ಲಿ ಶೇ. 95ರಷ್ಟು ಭಾಗವನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಶೇ. 5ರಷ್ಟನ್ನು ಮಹಾನಗರ ಪಾಲಿಕೆ ಭರಿಸಬೇಕಿದೆ ಎಂದು ಮುಖ್ಯ ಸಚೇತಕ ಎಂ.ಶಶಿಧರ ಹೆಗ್ಡೆ ಪ್ರಸ್ತಾವನೆ ಮಂಡಿಸಿದರು.

ಈ ಸಂದರ್ಭದಲ್ಲಿ ವಿಧಾ ಪರಿಷತ್‌ನ ಮುಖ್ಯ ಸಚೇತಕರಾಗಿ ನೇಮಕವಾದ ಐವನ್ ಡಿಸೋಜಾರನ್ನು ಸನ್ಮಾನಿಸಲಾಯಿತು. ಉಪ ಮೇಯರ್ ಸುಮಿತ್ರ ಕರಿಯ, ಸ್ಥಾಯಿ ಸಮಿತಿಗಳ ಅಧ್ಯಕ್ಷರಾದ ಅಪ್ಪಿ, ಕವಿತಾ ಸನಿಲ್, ಬಶೀರ್ ಅಹಮ್ಮದ್ ಉಪಸ್ಥಿತರಿದ್ದರು.

MCC

MCC

MCC

MCC

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English