- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ತಲೆಮರೆಸಿಕೊಂಡ ಗಾಂಜಾ ಪ್ರಕರಣದ ಆರೋಪಿ ಬಂಧನ

Ambachu [1]ಮಂಜೇಶ್ವರ: ಪೊಲೀಸರ ಕಾರ್ಯಾಚರಣೆಯ ಸಂದಭದಲ್ಲಿ ಗಾಂಜಾ ಹಾಗೂ ಆಟೋ ರಿಕ್ಷಾ ಉಪೇಕ್ಷಿಸಿ ಪರಾರಿಯಾಗಿದ್ದ ಆರೋಪಿ ಮಳ್ಳಂಗೈ ನಿವಾಸಿ ಅಬ್ಬಾಸ್ ಯಾನೆ ಅಂಬಾಚು(42) ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಜೂನ್ 4 ರಂದು ಉಪ್ಪಳ ಬಳಿಯ ಪತ್ವಾಡಿಯಲ್ಲಿ ಅಬ್ಬಾಸ್ ಯಾನೆ ಅಂಬಾಚು ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದ ವೇಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

ಈ ವೇಳೆ ಸಂದಭದಲ್ಲಿ ಗಾಂಜಾ ಹಾಗು ಆಟೋ ರಿಕ್ಷಾ ಉಪೇಕ್ಷಿಸಿ ಪರಾರಿಯಾಗಿದ್ದ. ರಿಕ್ಷಾದಿಂದ 200 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.