ಮುಂಬಯಿ: ಮಹಾಡ್ನ ಹೆದ್ದಾರಿಯಲ್ಲಿದ್ದ ಗೋವಾಕ್ಕೆ ಸಂಪರ್ಕ ಕಲ್ಪಿಸುವ ಶತಮಾನಗಳಷ್ಟು ಹಳೆಯದಾದ ಸೇತುವೆಯೊಂದು ಮಂಗಳವಾರ ತಡರಾತ್ರಿ ಪ್ರವಾಹದಿಂದ ಕುಸಿದ ಪರಿಣಾಮ 12ಕ್ಕೂ ಹೆಚ್ಚು ವಾಹನಗಳು ನೆರೆ ನೀರಿನಲ್ಲಿ ಕೊಚ್ಚಿ ಹೋಗಿ, 22 ಮಂದಿ ಕಣ್ಮರೆಯಾಗಿರುವ ಕುರಿತು ವರದಿಯಾಗಿದೆ.
ಸಾವಿತ್ರಿ ನದಿಗೆ ಅಡ್ಡಲಾಗಿದ್ದ ಬ್ರಿಟೀಷ್ ಕಾಲದ ಸೇತುವೆ ಕುಸಿದು ದುರಂತ ಸಂಭವಿಸಿದ್ದು,ಇದೀಗ ಸಮೀಪದಲ್ಲಿರುವ ಇನ್ನೊಂದು ಸೇತುವೆಯ ಮೂಲಕ ವಾಹನಗಳು ಸಂಚರಿಸುತ್ತಿವೆ. 2 ಬಸ್ಗಳು ಸೇರಿ ಇತರ ವಾಹನಗಳು ಕೊಚ್ಚಿ ಹೋಗಿರುವ ಕುರಿತು ವರದಿಯಾಗಿದೆ.
ಸ್ಥಳದಲ್ಲಿ ಎನ್ಡಿಆರ್ಎಫ್ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಕರಾವಳಿ ರಕ್ಷಣಾ ಪಡೆಯ ಹೆಲಿಕ್ಯಾಪ್ಟರ್ಗಳನ್ನು ಬಳಸಿಕೊಳ್ಳಲಾಗಿದೆ. ಇಲ್ಲಿಯವರೆಗೆ ಯಾವುದೆ ವಾಹನ ಪತ್ತೆಯಾದ ಕುರಿತು ವರದಿಯಾಗಿಲ್ಲ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಹರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ.
Click this button or press Ctrl+G to toggle between Kannada and English