ಕುಳಮರ್ವರ ಕವನಕ್ಕೆ ರಾಜ್ಯ ಪ್ರಶಸ್ತಿ

12:20 PM, Monday, August 8th, 2016
Share
1 Star2 Stars3 Stars4 Stars5 Stars
(No Ratings Yet)
Loading...

V-B-Kulamarvaಕುಂಬಳೆ: ಹಿರಿಯ ಜಾನಪದ ವಿದ್ವಾಂಸ ಡಾ.ಜೀ.ಶಂ.ಪ. ಸಾಹಿತ್ಯ ವೇದಿಕೆ ಮತ್ತು ಕನ್ನಂಬಾಡಿ ದಿನಪತ್ರಿಕೆ ಮಂಡ್ಯ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಸ್ಮರಣಾರ್ಥ ಏರ್ಪಡಿಸಿದ ರಾಜ್ಯಮಟ್ಟದ ಕವಿಕಾವ್ಯ ಮೇಳದಲ್ಲಿ ಕಾಸರಗೋಡಿನ ಖ್ಯಾತ ಕವಿ ಹಾಗೂ ಶಿಕ್ಷಣ ತಜ್ಞ ವಿ.ಬಿ.ಕುಳಮರ್ವ ಅವರ “ಸೇವೆಯ ಹಿರಿಮೆ” ಎಂಬ ದೇಶಭಕ್ತಿ ಗೀತೆಗೆ ರಾಜ್ಯಮಟ್ಟದ ’ಕಾವ್ಯಶ್ರೀ’ ಪ್ರಶಸ್ತಿಯನ್ನಿತ್ತು ಸನ್ಮಾನಿಸಲಾಯಿತು.

ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದ ಲಕ್ಷ ಸಂಖ್ಯೆಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರು ಸಂಪೂರ್ಣ ಗಣವೇಷದೊಂದಿಗೆ ನಡೆಸಿದ ಪಥಸಂಚಲನ ಕಾರ್ಯಕ್ರಮದಲ್ಲಿ ಹಾಡುವುದಕ್ಕಾಗಿ ವಿ.ಬಿ.ಕುಳಮರ್ವರು ಈ ಕವನವನ್ನು ರಚಿಸಿದ್ದರು.

ಇತ್ತೀಚೆಗೆ ಮಂಡ್ಯದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಕವಿಯ ಅನುಪಸ್ಥಿತಿಯಲ್ಲಿ ಅವರ ಪುತ್ರಿ ರಾಜ್ಯಶ್ರೀ ಕುಳಮರ್ವ ಅವರು ಪ್ರಶಸ್ತಿಯನ್ನು ಸ್ವೀಕರಿಸಿ ಪ್ರಶಸ್ತಿವಿಜೇತ ಕವನವನ್ನು ಸುಶ್ರಾವ್ಯವಾಗಿ ಹಾಡಿ ಮೆಚ್ಚುಗೆ ಗಳಿಸಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English