- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಕುಮಾರಧಾರಾ ನದಿಗೆ ಬಿದ್ದ ಟ್ಯಾಂಕರ್

Gas-Tanker [1]ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಣೆ ಮಾಡುತ್ತಿದ್ದ ಎಚ್‌ಪಿಸಿಎಲ್‌ ಕಂಪನಿಗೆ ಸೇರಿದ ಟ್ಯಾಂಕರ್ ಕುಮಾರಧಾರಾ ನದಿಗೆ ಬಿದ್ದಿದೆ.

ಟ್ಯಾಂಕರ್‌ನಿಂದ ಭಾರೀ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗುತ್ತಿದ್ದು, ಆತಂಕ ಸೃಷ್ಟಿಯಾಗಿದೆ.

ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಉಪ್ಪಿನಂಗಡಿ ಬಳಿಯ ಉದನೆ ನರ್ಸರಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ನದಿಗೆ ಉರುಳಿ ಬಿದ್ದಿದೆ. ಲಾರಿ ಸೇತುವೆಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬ್ರೇಕ್ ಹಾಕಿದಾಗ ಟ್ಯಾಂಕರ್ ನದಿಗೆ ಉರುಳಿದೆ.

ಕುಮಾರಧಾರಾ ನದಿಗೆ ಗ್ಯಾಸ್ ಸೋರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಕೆಲವು ಹೊತ್ತು ನದಿ ನೀರನ್ನು ಉಪಯೋಗಿಸಬಾರದು ಎಂದು ಪೊಲೀಸರು ಜನರಿಗೆ ಮನವಿ ಮಾಡಿದ್ದಾರೆ. ಟ್ಯಾಂಕರ್ ಉರುಳಿ ಬಿದ್ದ ಸ್ಥಳದ ಸಮೀಪ ಸರ್ಕಾರಿ ಶಾಲೆ ಇದ್ದು, ಜನರು ಆತಂಕಗೊಂಡಿದ್ದಾರೆ.

ಮಂಗಳೂರು, ಪುತ್ತೂರಿನ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಟ್ಯಾಂಕರ್ ಮೇಲೆತ್ತುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಪುತ್ತೂರು ಎಎಸ್ಪಿ ಸಿ.ಬಿ. ರಿಷ್ಯಂತ್ ಸ್ಥಳಕ್ಕೆ ಧಾವಿಸಿದ್ದಾರೆ.